BELLARY VARTHE
ಸೋಮವಾರ, ನವೆಂಬರ್ 10, 2025
ಬಿಐಟಿಎಂ: ಒಂದು ದಿನದ ಕಾರ್ಯಾಗಾರ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಆರ್ಎಎಂಪಿ ಯೋಜನೆಯಡಿ ನಗರದ ಅಲ್ಲೀಪುರದ ಬಳ್ಳಾರಿ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ ಮೆಂಟ್ (ಬಿಐಟಿಎಂ) ಕಾಲೇಜು ಸಭಾಂಗಣದಲ್ಲಿ ಇಂಕ್ಯುಬೇಶನ್ ಯೋಜನೆ ಕುರಿತು ಸೋಮವಾರ ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಬಳ್ಳಾರಿ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ ಮೆಂಟ್ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಘವೇಂದ್ರ ಜೋಷಿ ಅವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಬಿಐಟಿಎಂ ಕಾಲೇಜು ವತಿಯಿಂದ ಒಟ್ಟು 12 ಇಂಕ್ಯೂಬೇಶನ್ ಚಟುವಟಿಕೆಗಳ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಗರಿಷ್ಠ ರೂ.03 ಲಕ್ಷದಂತೆ ಪ್ರೋತ್ಸಾಹಧನ ಪಡೆದಿದೆ ಎಂದು ಹೇಳಿದರು.
ಯುವ ಪೀಳಿಗೆಯು ಹೊಸ ವಿಷಯಗಳ ಮೇಲೆ ಅನ್ವೇಷಣೆ ಮಾಡುವ ಆಸಕ್ತಿ ಬೆಳೆಸಿಕೊಳ್ಳಬೇಕು. ಇಂತಹ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ವಿದ್ಯಾರ್ಥಿಗಳಿಗೆ ಇಂಕ್ಯುಬೇಶನ್ ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು ಹಾಗೂ ಉದ್ಯಮಿಗಳು ತಮ್ಮ ಅನುಭವ ಮತ್ತು ಅನಿಸಿಕೆ ಹಂಚಿಕೊAಡರು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್.ಬಿ., ಎಐಎಂಎಲ್ ಹೆಚ್ಓಡಿ ಡಾ.ಬಿ.ಎಂ.ವಿದ್ಯಾವತಿ, ಇನೊವೇಷನ್ ಸೆಂಟರ್ ಹೆಚ್ ಬ್ರೀಕ್ಸ್ ಡಾ.ಮಲ್ಲಿಕಾರ್ಜುನ.ಎ., ಪ್ರಾಧ್ಯಾಪಕಿ ಡಾ.ರೇಣುಕ ಸಾಗರ್, ಸಹಾಯಕ ಪ್ರಾಧ್ಯಾಪಕ ಜಯ ಪ್ರಕಾಶ್, ರಾಯಲ್ಗ್ ಇಂಡಸ್ಟಿçÃಸ್ನ ಸಂಸ್ಥಾಪಕ ಹಾಗೂ ನಿರ್ದೇಶಕ ರಾಯಮಂಡ್ ಇರುದಯರಾಜ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.
------------
ಅಂತರಾಷ್ಟಿçÃಯ ದತ್ತು ಮಾಸಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಎನ್.ಹೊಸಮನೆ ಹೇಳಿಕೆ | ಅಕ್ರಮ ದತ್ತು ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಅಪರಾಧ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಅಕ್ರಮ ದತ್ತು ಕಾರ್ಯದಲ್ಲಿ ಭಾಗವಹಿಸುವುದು ಅಪರಾಧವಾಗಿದ್ದು, ಭಾಗವಹಿಸಿರುವುದು ದೃಢವಾದಲ್ಲಿ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಎಂದು ತಿಳಿಸಿದರು.
ಅಂತರಾಷ್ಟಿçÃಯ ದತ್ತು ಮಾಸಾಚರಣೆ ಅಭಿಯಾನದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ವಿಶೇಷ ದತ್ತು ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ‘ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆ’ ಎಂಬ ಘೋಷವಾಕ್ಯದಡಿ ನಗರದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅಜಾದ್ ವಸತಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವನ ಜೀವ ಅತೀ ಅಮೂಲ್ಯವಾಗಿದ್ದು, ಯಾವುದೇ ಕಾರಣದಿಂದಾಗಿ ಪೋಷಕರು ನವಜಾತ ಶಿಶುಗಳನ್ನು ಬಿಟ್ಟುಹೋಗಿರುವುದು ಕಂಡುಬAದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಗಮನಕ್ಕೆ ತರಬೇಕು. ಅಂತಹ ಮಕ್ಕಳನ್ನು ರಕ್ಷಣೆ ಮಾಡಿ ಆರೈಕೆ ಮಾಡಿ, ಒಳ್ಳೆಯ ಕುಟುಂಬ ಮತ್ತು ಪೋಷಕರಿಗೆ ಮಕ್ಕಳನ್ನು ದತ್ತು ನೀಡುವ ಮೂಲಕ ಅಂತಹ ಮಕ್ಕಳಿಗೆ ಒಳ್ಳೆಯ ಜೀವನ ನೀಡಲು ಸಾಧ್ಯ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.
ಕಾನೂನಿನ ನೆರವು ಅಗತ್ಯವುಳ್ಳ ಬಡ ಮತ್ತು ನಿರ್ಗತಿಕ ಕುಟುಂಬಗಳು ಉಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಸೇವೆ ಪಡೆದುಕೊಳ್ಳಬಹುದು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭಧ್ರದೇವಿ ಅವರು ಮಾತನಾಡಿ, ಮಕ್ಕಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳನ್ನು ಬಾಲ್ಯವಿವಾಹ, ಬಾಲಕಾರ್ಮಿಕ, ಭಿಕ್ಷಾಟನೆ, ಲೈಂಗಿಕ ಕಿರುಕುಳ ಮತ್ತು ಇನ್ನಿತರೆ ಸಂಕಷ್ಟಕ್ಕೆ ಒಳಗಾದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಒಂದುವೇಳೆ ಅಂತಹ ಸಮಸ್ಯೆಗಳು ಎದುರಿಸುತ್ತಿದ್ದರೆ, ಇಲ್ಲವೇ ಕಂಡುಬAದಲ್ಲಿ ನಿರ್ಭಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, 112 ಗೆ ಕರೆ ಮಾಡಬೇಕು. ಮಾಹಿತಿ ನೀಡಿದವರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.
ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಮಕ್ಕಳ ಸುರಕ್ಷತೆ ಕುರಿತು ಅರಿವು ಮೂಡಿಸುವುದು ಅಗತ್ಯ. ಪ್ರತಿ ಶಾಲೆಯಲ್ಲಿ ದೂರು ಪೆಟ್ಟಿಗೆಯನ್ನು ನಿರ್ವಹಿಸಿ ದೂರುಗಳನ್ನು ಪ್ರತಿ ತಿಂಗಳು ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.
ಮಕ್ಕಳ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿ ಲಲಿತಮ್ಮ ಅವರು ಮಾತನಾಡಿ, ಹೆಣ್ಣು ಮಕ್ಕಳು ಅಂತರ್ಜಾಲದಲ್ಲಿ ತಮ್ಮ ವೈಯಕ್ತಿಕ ಮಾಹಿತಿ ಮತ್ತು ಫೋಟೋಗಳನ್ನು ಹಂಚಿಕೊಳ್ಳಬಾರದು. ಸೈಬರ್ ಕ್ರೆöÊಮ್ ಕುರಿತು ಅರಿವು ಪ್ರತಿಯೊಬ್ಬರೂ ಹೊಂದಬೇಕು ಎಂದು ಹೇಳಿದರು.
ನಂತರ ಮಕ್ಕಳ ವಿಶೇಷ ಪೊಲೀಸ್ ಘಟಕದ ಸೇವೆಗಳು, ಕಾರ್ಯವೈಖರಿ, ಪ್ರತಿ ಪೊಲೀಸ್ ಠಾಣೆಯಿಂದ ತೆರೆದ ಮನೆ ಕಾರ್ಯಕ್ರಮಗಳ ಕುರಿತು ತಿಳಿಸಿದರು.
ವಸತಿ ಶಾಲೆಯ ಪ್ರಾಂಶುಪಾಲ ಕೆ.ಎಂ.ಮೂಕಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಮಕ್ಕಳ ಸಹಾಯವಾಣಿ ಸಂಖ್ಯೆ-1098, ಪೊಲೀಸ್ ಸೇವೆ-112, ಸೈಬರ್ ಕ್ರೆöÊಮ್ -1930 ಮತ್ತು ಉಚಿತ ರಾಷ್ಟಿçÃಯ ಕಾನೂನು ಸೇವೆಗಳ ಸಂಖ್ಯೆ -15100 ಗಳನ್ನು ನೆನಪಿಟ್ಟುಕೊಂಡು ಅಗತ್ಯ ಸಂದರ್ಭಗಳಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಕ್ಕಳ ರಕ್ಷಣಾಧಿಕಾರಿ (ಆಸಾಂಸ್ಥಿಕ ಸೇವೆ) ಚನ್ನಬಸಪ್ಪ ಪಾಟೀಲ್ ಅವರು ದತ್ತು ಕುರಿತ ಪ್ರತಿಜ್ಞಾವಿಧಿ ಭೋದಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ನಾಗಯ್ಯ ಹಿರೇಮಠ, ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್, ಮಕ್ಕಳ ಸಹಾಯವಾಣಿ ಸಂಯೋಜಕ ಕೆ. ಆನಂದ, ಮಿಷನ್ ಶಕ್ತಿ ಸಂಯೋಜಕಿ ಶಹಜಹಾನ್, ದತ್ತು ಸಂಸ್ಥೆಯ ಸಿಬ್ಬಂದಿ ಗಣೇಶ್ ಸೇರಿದಂತೆ ವಸತಿ ಶಾಲೆಯ ಶಿಕ್ಷಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ವಸತಿ ನಿಯಲದ 300ಕ್ಕೂ ಹೆಚ್ಚು ಮಕ್ಕಳು ಉಪಸ್ಥಿತರಿದ್ದರು.
--------------
ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ರೋಗ ತಡೆಗಟ್ಟಬಹುದು: ಡಿಹೆಚ್ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ರೋಗವನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
2014 ರಲ್ಲಿ ಪ್ರಾರಂಭಿಸಲಾದ ರಾಷ್ಟಿçÃಯ ಕ್ಯಾನ್ಸರ್ ಜಾಗೃತಿ ದಿನವನ್ನು ಪ್ರತಿ ವರ್ಷ ನವೆಂಬರ್ 7 ರಂದು ಆಚರಿಸಲಾಗುತ್ತದೆ. ಕ್ಯಾನ್ಸರ್ ತಡೆಗಟ್ಟುವಿಕೆ, ಕ್ಯಾನ್ಸರ್ನ ವಿವಿಧ ರೂಪಗಳು, ಅಪಾಯಕಾರಿ ಅಂಶಗಳು ಮತ್ತು ತಡೆಗಟ್ಟುವಿಕೆ, ಕ್ಯಾನ್ಸರ್ ಲಕ್ಷಣಗಳನ್ನು ಮೊದಲೇ ಪತ್ತೆ ಹಚ್ಚುವುದು ಮತ್ತು ಚಿಕಿತ್ಸೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
*ಮುಂಜಾಗ್ರತೆ ವಹಿಸಬೇಕಾದ ಕ್ರಮ:*
ಧೂಮಪಾನ ಮತ್ತು ತಂಬಾಕು ಸೇವನೆಯು ಬಾಯಿ ಕ್ಯಾನ್ಸರ್ ಮತ್ತು ಶಾಸ್ವಕೋಶ ಕ್ಯಾನ್ಸರ್ಗಳಿಗೆ ಪ್ರಮುಖ ಕಾರಣವಾಗಿದ್ದು, ಅತಿಯಾದ ಮದ್ಯಪಾನ ಯಕೃತ್ತು, ಸ್ತನ ಮತ್ತು ಜೀರ್ಣಾಂಗಗಳ ಕ್ಯಾನ್ಸರ್ ಉಂಟಾಗಬಹುದು. ಹಾಗಾಗಿ ಅವುಗಳಿಂದ ದೂರವಿರಬೇಕು ಎಂದಿದ್ದಾರೆ.
ಆರೋಗ್ಯಕರ ಆಹಾರ, ಹಣ್ಣುಗಳು, ತರಕಾರಿಗಳು, ಧಾನ್ಯಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರ ಸೇವಿಸಬೇಕು. ಸಂಸ್ಕರಿಸಿದ ಆಹಾರ ಕಡಿಮೆ ಮಾಡಬೇಕು. ನಿಯಮಿತ ದೈಹಿಕ ಚಟುವಟಿಕೆ ಮಾಡುವುದರಿಂದ ಕ್ಯಾನ್ಸರ್ ಅಪಾಯ ತಡೆಗಟ್ಟಬಹುದಾಗಿದೆ.
ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಚರ್ಮದ ಕ್ಯಾನ್ಸರ್ಗೆ ತಡೆಗಟ್ಟಲು ಹಾನಿಕಾರಕ ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಬೇಕು. ನಿಯಮಿತ ಮಮೊಗ್ರಾಮ್ಗಳು, ಪ್ಯಾಪ್ ಸ್ಮೀಯರ್ಗಳು ಮತ್ತು ಕೊಲೊನೋಸ್ಕೋಪಿಗಳಂತಹ ಸ್ಕಿçÃನಿಂಗ್ ಗಳನ್ನು ಆಗಾಗ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತಿ ಸೋಮವಾರ ಹಾಗೂ ಗುರುವಾರ ದಿನಗಳಂದು ಹುಬ್ಬಳ್ಳಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಿಂದ ಕ್ಯಾನ್ಸರ್ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಮತ್ತು ಕಿಮೋಥೆರಫಿ ಚಿಕಿತ್ಸೆ ನೀಡಲಾಗುತ್ತದೆ. ಜಿಲ್ಲಾ ಆಸ್ಪತ್ರೆಯಲ್ಲಿ ಕೀಮೋಥೆರಫಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ವಾರ್ಡ್ನ ಸೌಲಭ್ಯವಿದೆ.
ಪ್ರಸ್ತುತ ವರ್ಷ ಏಪ್ರೀಲ್ ನಿಂದ ಅಕ್ಟೋಬರ್ ತಿಂಗಳವರೆಗೆ ತಪಾಸಣೆಯಾದ ಒಟ್ಟು ಕ್ಯಾನ್ಸರ್ ಪ್ರಕರಣಗಳು-96, ಕೀಮೋಥೆರಫಿ ಚಿಕಿತ್ಸೆಯಲ್ಲಿರುವ ಒಟ್ಟು ಪ್ರಕರಣ-45, ಬಾಯಿ ಕ್ಯಾನ್ಸರ್-14, ಗರ್ಭಕಂಠದ ಕ್ಯಾನ್ಸರ್-16, ಯಕೃತ್ ಕ್ಯಾನ್ಸರ್-2, ಅಂಡಾಶಯ ಕ್ಯಾನ್ಸರ್-4, ಶಾಸ್ವಕೋಶ ಕ್ಯಾನ್ಸರ್-1, ಸ್ತನ ಕ್ಯಾನ್ಸರ್-8 ಪ್ರಕರಣಗಳು ಕಂಡುಬAದಿವೆ ಎಂದು ಡಿಹೆಚ್ಓ ಮಾಹಿತಿ ನೀಡಿದ್ದಾರೆ.
ತಾಲ್ಲೂಕು ಮಟ್ಟದಲ್ಲಿ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಾರ್ವಜನಿಕರಿಗೆ ವಿವಿಧ ಹಂತಗಳಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು, ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಕ್ಯಾನ್ಸರ್ ಜಾಗೃತಿ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಇದರ ಕುರಿತು ಮಾಹಿತಿ ಪಡೆದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಕಾರ್ಯಕ್ರಮಗಳಡಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ www.sw.kar.nic.in ಅಥವಾ https://ssp.postmatric.karnataka.gov.in/homepage.aspx ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದು.
*ಸೂಚನೆಗಳು*:
ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಬಾರಿಗೆ, ಪ್ರಥಮ ಪ್ರಯತ್ನದಲ್ಲಿ ಪಾಸಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾಥಿವೇತನ ಪಡೆದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿಗೆ ಅರ್ಜಿ ಸಲ್ಲಿಸಬಹುದು.
ಕಳೆದ ಸಾಲಿನಲ್ಲಿ ವಿವಿಧ ಕಾರಣಗಳಿಂದ ವಿದ್ಯಾರ್ಥಿ ವೇತನ ಮಂಜೂರಾಗದ ಹಾಗೂ ರಿಜೆಕ್ಟ್ ಆಗಿರುವ ವಿದ್ಯಾರ್ಥಿಗಳು ಮಾತ್ರ ಪ್ರಸಕ್ತ ಸಾಲಿನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ಎನ್ಪಿಸಿಐ ಆಧಾರ್ ಸೀಡಿಂಗ್ ಮಾಡಿಸಿರಬೇಕು. ತೊಂದರೆಯಿದ್ದಲ್ಲಿ ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆಯಬೇಕು. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪ್ರತಿ ಶೈಕ್ಷಣಿಕ ಸಾಲಿಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದು.
ಪ್ರಸಕ್ತ ಸಾಲಿನಿಂದ ಪ್ರತಿ ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಕಾಲೇಜು ಪ್ರಾಂಶುಪಾಲರು ಗಳಿಗೆ ಸಬಲೀಕರಣ ಅಧಿಕಾರಿ ಅಥವಾ ಸಂಸ್ಥೆಯ ನೋಡಲ್ ಅಧಿಕಾರಿಯನ್ನು ನಿಯೋಜಿಸಿದ್ದು, ತಾಲ್ಲೂಕು ಲಾಗಿನ್ನಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕ್ರಮವಹಿಸಬೇಕು. ನಂತರ ಸೇರ್ಪಡೆಯಾದ ಅಧಿಕಾರಿಗಳ ಇ-ಕೆವೈಸಿ ವಿವರಗಳನ್ನು ಅಪ್ಡೇಟ್ ಮಾಡಿ ಅನುಮೋದಿಸುತ್ತಾರೆ.
ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲು ಬಯೋಮೇಟ್ರಿಕ್ ಇ-ಧೃಢಿಕರಣ/ಎನ್ಎಸ್ಪಿ ಒಟಿಆರ್ ನೊಂದಣಿಯನ್ನು ಮಾಡಿಸಿದ ನಂತರ ಎಸ್ಎಸ್ಪಿ ಯಲ್ಲಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಮೊದಲನೇ ರೈಲ್ವೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ(ಗ್ರೇಡ್-1) ಕಚೇರಿ ಅಥವಾ ದೂ.08392-244738, ಮೊ.9480843073 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ನ.13 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ. ಫೀಡರನಲ್ಲಿ ನ.13 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಎಫ್-9 ವ್ಯಾಪ್ತಿಯ ನೆಹರು ಕಾಲೋನಿ, ಎಸ್.ಎನ್.ಪೇಟೆ 1ನೇ, 2ನೇ, 4ನೇ, 5ನೇ ಮತ್ತು 6ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಡಿಎಆರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌAಡ್, ಗಡಿಗಿ ಚೆನ್ನಪ್ಪ ವೃತ್ತ, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ಹಳೆಯ ತಾಲ್ಲೂಕು ಕಚೇರಿ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ, ರೈಲ್ವೇ ಸ್ಟೇಷನ್ ರೋಡ್ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಡಿ.13 ರಂದು ರಾಷ್ಟಿçÃಯ ಲೋಕ್ ಅದಾಲತ್
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 13 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.
*ಸೂಚನೆ:*
ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್ ಗೆ ಸಂಬAಧಿಸಿದAತೆ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ.
ಹೆಚ್ಚಿನ ಮಾಹಿತಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್ಎಎಲ್ಎಸ್ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ತಿಳಿಸಿದ್ದಾರೆ.
---------------
ನ.14 ರಂದು ನೀರಾವರಿ ಸಲಹಾ ಸಮಿತಿ ಸಭೆ
ಬಳ್ಳಾರಿ,ನ.10(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿಗೆ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ತುಂಗಾಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ಒದಗಿಸುವ ಕುರಿತು ಚರ್ಚಿಸಲು ನ.14 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3 ನೇ ಮಹಡಿಯ ಕೊಠಡಿ ಸಂಖ್ಯೆ 334 ರ ಸಮ್ಮೇಳನ ಸಭಾಂಗಣದಲ್ಲಿ 125 ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.
ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಭೆಗೆ ಸಂಬAಧಿಸಿದ ಸಚಿವರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರು, ರೈತ ಮುಖಂಡರು ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡಬಹುದು ಎಂದು ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆದ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)






