ಶುಕ್ರವಾರ, ಮಾರ್ಚ್ 24, 2023
ಅರ್ಜಿ ಆಹ್ವಾನ
ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2023-2024 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡಿ ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿಗೆ ಸೇರಿಸಲು ಜಿಲ್ಲೆಯಿಂದ 04 ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ 6 ಮತ್ತು 7ನೇ ತರಗತಿಯ ಅಂಕಪಟ್ಟಿಯೊಂದಿಗೆ ಏಪ್ರೀಲ್ 5 ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಾಷು ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ