ಶುಕ್ರವಾರ, ಮಾರ್ಚ್ 31, 2023

ಅನಾಮಧೇಯ ವ್ಯಕ್ತಿ ಮೃತ; ವಾರಸುದಾರರ ಪತ್ತೆಗಾಗಿ ಬಳ್ಳಾರಿ,ಮಾ.31(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಗುಗ್ಗರಹಟ್ಟಿಯ ರೈಲ್ವೇ ಗೇಟ್ ಹತ್ತಿರ ಸುಮಾರು 55 ರಿಂದ 60 ವರ್ಷದ ಅನಾಮಧೇಯ ವ್ಯಕ್ತಿಯು ಪ್ರಜ್ಞೆ ತಪ್ಪಿ ಬಿದ್ದಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ಚಿಕಿತ್ಸೆ ಫಲಿಸದೇ ಮಾ.28ರಂದು ಮೃತ ಪಟ್ಟಿರುತ್ತಾನೆ. ಮೃತ ದೇಹವು ವಿಮ್ಸ್ ಆಸ್ಪತ್ರೆಯ ಶವಗಾರದಲ್ಲಿರುತ್ತದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಪೋಲಿಸ್‍ಠಾಣೆಯ ಎಎಸ್‍ಐ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಹರೆ ಗುರುತು: ಸಾಧರಣ ಮೈಕಟ್ಟು, ಕೋಲುಮುಖ, ಕಪ್ಪು ಮೈಬಣ್ಣ, ಬಿಳಿ ಗಡ್ಡ, ಬೋಳು ತಲೆ, ಎದೆಯ ಎಡಭಾಗದಲ್ಲಿ ಸಣ್ಣ ಕಪ್ಪು ಮಚ್ಚೆ ಇರುತ್ತದೆ. ಮೃತನ ವಾರಸುದಾರರಿದ್ದಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದಾಗಿದೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ