ಶುಕ್ರವಾರ, ಮಾರ್ಚ್ 24, 2023
ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮಾ.27ರಿಂದ
ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ): ಬಳ್ಳಾರಿ ವಿಭಾಗದ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರಾದ ಪಿ.ಎ.ಪುರುಷೋತ್ತಮ ಮಾರ್ಗದÀರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಕೆ.ರಾಮರಾವ್ ಮತ್ತು ಪೆÇಲೀಸ್ ನಿರೀಕ್ಷಕರಾದ ಮಹಮ್ಮದ್ ರಫಿ, ಸಂಗಮೇಶ್ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕಂಪ್ಲಿ, ಕುರುಗೋಡು, ಸಂಡೂರು ಮತ್ತು ಸಿರುಗುಪ್ಪ ತಾಲೂಕು ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಿಗೆ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರವನ್ನು ಮಾ.27ರಿಂದ 31ರವರೆಗೆ ನಡೆಸಲಾಗುತ್ತದೆ ಎಂದು ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರಾದ ಪಿ.ಎ.ಪುರುಷೋತ್ತಮ ಅವರು ತಿಳಿಸಿದ್ದಾರೆ.
ಮಾ.27ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣ ಮತ್ತು ಮಾ.28ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಕುರುಗೋಡು ತಹಶೀಲ್ದಾರರ ಕಚೇರಿ ಸಭಾಂಗಣ ಮತ್ತು ಮಾ.29ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಸಿರುಗುಪ್ಪ ತಹಶೀಲ್ದಾರರ ಕಚೇರಿ ಸಭಾಂಗಣ, ಮಾ.30ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣ, ಮಾ.31ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಬಳ್ಳಾರಿಯ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಇಲ್ಲಿ ಕುಂದು ಕೊರತೆಗಳಿರುವ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ