ಶುಕ್ರವಾರ, ಮಾರ್ಚ್ 24, 2023

ರೂಪನಗುಡಿಯಲ್ಲಿ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ನಿಮಿತ್ತ ಜಾಗೃತಿ ಕಾರ್ಯಕ್ರಮ ಬಳ್ಳಾರಿ,ಮಾ.24(ಕರ್ನಾಟಕ ವಾರ್ತೆ): ರೂಪನಗುಡಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇತ್ತೀಚೆಗೆ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು. ದಂತ ತಜ್ಞೆ ಡಾ.ಪ್ರಿಯಾಂಕಾ ರೆಡ್ಡಿ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ನಮ್ಮ ದೇಹ ಸಂಪೂರ್ಣ ಆರೋಗ್ಯವಾಗಿಡಲು ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಪ್ರತಿದಿನ ಹಲ್ಲುಜ್ಜಬೇಕು. ತಂಬಾಕು ಮತ್ತು ಕೆಟ್ಟ ಚಟಗಳಿಂದ ದೂರಬೇಕು ಮತ್ತು ತಿಂಗಳಿಗೊಮ್ಮೆ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಬಾಯಿ ತಪಾಸಣೆ ಮಾಡಿಸಿಕೊಳ್ಳಿ ಎಂದು ತಿಳಿಸಿದರು. ಆಡಳಿತ ವೈದ್ಯಾಧಿಕಾರಿ ಡಾ.ಚಿತ್ರಾ ವರ್ನೇಕರ್ ಅವರು ಮಾತನಾಡಿ, ಬಾಯಿ ಆರೋಗ್ಯದ ಸಮಸ್ಯೆಗಳು ಇರುವವರು ತಪ್ಪದೇ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಅದು ಬಾಯಿ ಕ್ಯಾನ್ಸರ್‍ಗೆ ಕಾರಣವಾಗಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಆಯುμï ವೈದ್ಯಾಧಿಕಾರಿ ಡಾ.ನಾರಾಯಣ ಬಾಬು ಟಿ.ಎಂ, ಕಚೇರಿ ಅಧೀಕ್ಷಕಿ ಶಿಲ್ಪಾ, ಪ್ರಥಮ ದರ್ಜೆ ಸಹಾಯಕ ವಿರೂಪಾಕ್ಷಸ್ವಾಮಿ, ಸಮುದಾಯ ಆರೋಗ್ಯಾಧಿಕಾರಿ ಲಲಿತಮ್ಮ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ