ಗುರುವಾರ, ಮಾರ್ಚ್ 16, 2023
ಅಪ್ರೆಂಟಿಶಿಪ್ ತರಬೇತಿಗಾಗಿ ನೇರ ಸಂದರ್ಶನ ಮಾ.23ರಂದು
ಬಳ್ಳಾರಿ,ಮಾ.15(ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ಘಟಕಗಳಲ್ಲಿ ಐಟಿಐ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಮಾ.23ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಎಸ್.ಪಿ.ಸರ್ಕಲ್ ಹತ್ತಿರದ ಸಿರುಗುಪ್ಪ ರಸ್ತೆಯ ಕಕರಸಾನಿ ಬಳ್ಳಾರಿ ವಿಭಾಗೀಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಬಳ್ಳಾರಿ ವಿಭಾಗದ ಬಳ್ಳಾರಿ-2 ಘಟಕ, ಬಳ್ಳಾರಿ-3 ಘಟಕ, ಸಿರುಗುಪ್ಪ ಘಟಕಗಳಲ್ಲಿ ಅಟೋಎಲೆಕ್ಟ್ರಿಷಿಯನ್ 6, ಡೀಸೆಲ್ ಮೆಕಾನಿಕ್ 10, ಎಂ.ಎಂ.ವಿ ವಿಭಾಗದಲ್ಲಿ 7 ಸೇರಿ ಒಟ್ಟು 23 ಸ್ಥಾನಗಳಿವೆ.
ಬೇಕಾದ ದಾಖಲೆಗಳು: ನಕಲು ಪ್ರತಿಗಳ ದೃಢೀಕರಣದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿದ್ದು, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಅಂಕಪಟ್ಟಿ, ಜಾತಿ ಮತ್ತು ಪ್ರಮಾಣ ಪತ್ರ, ಇತ್ತೀಚಿನ 2 ಭಾವಚಿತ್ರ, ಆಧಾರ್ಕಾರ್ಡ್, ಬ್ಯಾಂಕ್ ಪಾಸ್ಪುಸ್ತಕ ತರಬೇಕು.
ಹೆಚ್ಚಿನ ಮಾಹಿತಿಗಾಗಿ www.kkrtc.karnataka.gov.in ವೆಬ್ಸೈಟ್ ಗೆ ಭೇಟಿ ನೀಡಬಹುದಾಗಿದೆ ಎಂದು ಕೆಕೆಆರ್ಟಿಸಿ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ.ದೇವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ