ಶನಿವಾರ, ಏಪ್ರಿಲ್ 29, 2023
ಏ.30 ರಂದು ಪ್ರಜಾಪ್ರಭುತ್ವ ಹಬ್ಬ ಕಾರ್ಯಕ್ರಮ
ಬಳ್ಳಾರಿ,ಏ.29(ಕರ್ನಾಟಕ ವಾರ್ತೆ):
ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಏ.30 ರಂದು ಬೆಳಗ್ಗೆ 08 ಕ್ಕೆ ನಗರದ ಮೋತಿ ಸರ್ಕಲ್ ಬಳಿ ಪ್ರಜಾಪ್ರಭುತ್ವ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮತದಾನ ಜಾಗೃತಿ ಜಾಥಾ: ಪ್ರಜಾಪ್ರಭುತ್ವ ಹಬ್ಬ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 07 ಕ್ಕೆ ನಗರದ ಎಸ್.ಪಿ ಸರ್ಕಲ್ ಬಳಿಯಿಂದ ಮತದಾನ ಜಾಗೃತಿ ಜಾಥಾ ನಡೆಯಲಿದ್ದು, ಜಾಥಾವು ಜಿಲ್ಲಾ ಮಕ್ಕಳ ಆಸ್ಪತ್ರೆ ಮೂಲಕ ಎಪಿಎಂಸಿ, ರೇಡಿಯೋ ಪಾರ್ಕ್, 2 ನೇ ರೈಲ್ವೇ ಗೇಟ್ನಿಂದ ಮೋತಿ ಬಳಿ ಅಂತ್ಯಗೊಳ್ಳುತ್ತದೆ. ನಂತರ ಮೋತಿ ವೃತ್ತದ ಬಳಿ ಬೆಳಗ್ಗೆ 08 ಕ್ಕೆ ಪ್ರಜಾಪ್ರಭುತ್ವದ ಹಬ್ಬದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ