ಬುಧವಾರ, ಮೇ 24, 2023
ಗ್ರಾಹಕರ ಸಂರಕ್ಷಣಾ ಕಾಯ್ದೆ: ಜೂ 01ರಂದು ಫೋನ್-ಇನ್ ಕಾರ್ಯಕ್ರಮ
ಬಳ್ಳಾರಿ,ಮೇ 24(ಕರ್ನಾಟಕ ವಾರ್ತೆ):
ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ‘ಗ್ರಾಹಕರ ಸಂರಕ್ಷಣಾ ಕಾಯ್ದೆ-2019’ರ ಕುರಿತು ಗ್ರಾಹಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿಗಳಾದ ವಿಜಯಕುಮಾರ್ ಅವರೊಂದಿಗೆ ಜೂನ್ 01 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ದೂ.080-22370477/22370488/22370499 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಅಥವಾ ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಮಿಂಚಂಚೆ ಮೂಲಕ consumergrievances.queries@gmail.com ಗೆ ಮೇ 31 ರೊಳಗಾಗಿ ಕಳುಹಿಸಿಕೊಡಬಹುದು.
ಆಸಕ್ತ ಸಾರ್ವಜನಿಕರು, ಗ್ರಾಹಕರು ಹಾಗೂ ವಕೀಲರು ಕಳುಹಿಸಿ ಕಾರ್ಯಕ್ರಮವನ್ನು ಜೂನ್ 01ರಂದು ರೇಡಿಯೋ ಮೂಲಕ ಆಲಿಸಬಹುದಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಸಹಾಯಕ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ