ಗುರುವಾರ, ಮೇ 18, 2023

6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿ: ಅರ್ಜಿ ಆಹ್ವಾನ ಬಳ್ಳಾರಿ,ಮೇ 18(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ 6ನೇ ತರಗತಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ಶಾಲೆಗಳ ವಿವರ:* ವಸತಿ ರಹಿತ ಶಾಲೆಗಳಾದ ಅಲ್ಲೀಪುರದ ವಿಶ್ವೇಶ್ವರಯ್ಯ ಪ್ರೌಢ ಶಾಲೆ (ಬೆಸ್ಟ್ ಸ್ಕೂಲ್), ವಿದ್ಯಾನಗರದ ನಂದ ವಸತಿ ಶಾಲೆ, ಬೆಳಗಲ್ ಕ್ರಾಸ್‍ನ ನಂದಿ ಪೌಢಶಾಲೆ (ಸಿ.ಬಿ.ಎಸ್.ಇ). ವಸತಿ ಸಹಿತ ಶಾಲೆಗಳಾದ ಸಿರುಗುಪ್ಪ ವಿಜಯಮೇರಿ ಪ್ರಾಥಮಿಕ ಶಾಲೆ, ದಮ್ಮೂರಿನ ಬೃಂದಾ ಇಂಟರ್‍ನ್ಯಾಷನಲ್ ಸ್ಕೂಲ್. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 5 ನೇ ತರಗತಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‍ಕಾರ್ಡ್ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳುನ್ನು ಮೇ 25 ರೊಳಗೆ ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೌಲ್‍ಬಜಾರ್ ಮೊದಲನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಹಾಯಕ ನಿರ್ದೇಶಕರ ಕಚೇರಿ ಅತವಾ ದೂ.08392-244738, ಮೊ.9480843073 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ