ಬುಧವಾರ, ಜೂನ್ 28, 2023
ಬಳ್ಳಾರಿ ನಗರದಲ್ಲಿ ವಿವಿಧಡೆ ದಾಳಿ: 08 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ರಕ್ಷಣೆ
ಬಳ್ಳಾರಿ,ಜೂ.28(ಕರ್ನಾಟಕ ವಾರ್ತೆ):
ಜಿಲ್ಲಾ ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಬಚಪನ್ ಬಚಾವೋ ಆಂದೋಲನ, ಪೆÇೀಲಿಸ್ ಇಲಾಖೆ,ˌ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಬುಧವಾರದಂದು ಕಾರ್ಮಿಕ ನಿರೀಕ್ಷಕರಾದ ಎಂ.ಅಶೋಕ, ಬಚಪನ್ ಬಚಾವೋ ಆದೋಲನ ರಾಜ್ಶ ಸಮನ್ವಯಾಧಿಕಾರಿ ಬೀನು ವರ್ಗೀಸ, ಕ್ಷೇತ್ರಾಧಿಕಾರಿ ಪಿ.ಎಂ ಈಶ್ವರಯ್ಯ ಮತ್ತು ಇತರ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ 08 ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.
ನಗರದ ಗಾಂಧಿನಗರ, ಅನಂತರಪುರ ರಸ್ತೆ, ತಾರಾನಾಥ ಆಸ್ಪತ್ರೆ ಹತ್ತಿರ, ಎಂಜಿ ಆಟೋ ಮೋಬೈಲ್ಸ್ ಹತ್ತಿರದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) 1986 ಕಾಯ್ದೆ ಉಲ್ಲಂಘನೆ ಮಾಡಿದ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ 08 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸುವಂತೆ ಮನವೊಲಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ