ಬುಧವಾರ, ಜೂನ್ 28, 2023

ಬಕ್ರೀದ್ ಹಬ್ಬ ಹಿನ್ನಲೆ: ಜಿಲ್ಲೆಯಾದ್ಯಂತ ಅನಧೀಕೃತ ಗೋವು, ಒಂಟೆÀ ಸಾಗಾಣಿಕೆ ಮತ್ತು ವಧೆ ನಿಷೇಧ ಬಳ್ಳಾರಿ,ಜೂ.28(ಕರ್ನಾಟಕ ವಾರ್ತೆ): ಬಕ್ರೀದ್ ಹಬ್ಬದ ನಿಮಿತ್ತ ಜಿಲ್ಲೆಯಲ್ಲಿ ಅನಧೀಕೃತ ಗೋವು, ಒಂಟೆಗಳ ಸಾಗಾಣಿಕೆ ಮತ್ತು ವಧೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಎಸ್.ಎನ್.ರುದ್ರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ದೇಶದಲ್ಲೆಡೆ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಮತ್ತು ವಧೆಯನ್ನು ನಿಷೇಧಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬಕ್ರಿದ್ ಹಬ್ಬದ ಅಚರಣೆ ಪ್ರಯುಕ್ತ ಅಕ್ರಮ ಗೋವು, ಒಂಟೆಗಳ ಸಾಗಾಣಿಕೆ ಮತ್ತು ವಧೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಇರುವ ಚೆಕ್‍ಪೋಸ್ಟ್‍ಗಳಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಗಳು, ಪೆÇೀಲಿಸ್ ಇಲಾಖೆ ಮತ್ತು ಆರ್.ಟಿ.ಓ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಕಟ್ಟುನಿಟ್ಟಿನ ನಿಗಾವಹಿಸಲು ಸೂಚಿಸಿದ್ದಾರೆ. ಆದ್ದರಿಂದ ಅಕ್ರಮ ಗೋವು, ಒಂಟೆಗಳ ಸಾಗಾಣಿಕೆ ಮತ್ತು ವಧೆ ಕಂಡುಬಂದಲ್ಲಿ ಸಾರ್ವಜನಿಕರು ಪಶುಸಂಗೋಪನಾ ಇಲಾಖೆ ಅಥವಾ ಪೆÇೀಲೀಸ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ