ಬುಧವಾರ, ಜೂನ್ 28, 2023

ಬಿಡಾಡಿ ದನಗಳನ್ನು ಮನೆಯಲ್ಲಿಯೇ ಕಟ್ಟಿಹಾಕಿ; ಇಲ್ಲದಿದ್ದರೆ ಕ್ರಮ ಬಳ್ಳಾರಿ,ಜೂ.28(ಕರ್ನಾಟಕ ವಾರ್ತೆ): ಕುರುಗೋಡು ಪಟ್ಟಣದ ಜಾನುವಾರುಗಳ ಮಾಲೀಕರು ತಮ್ಮ ದನಗಳನ್ನು ತಮ್ಮ ಸ್ವಂತ ಜಾಗದಲ್ಲಿ ಕಟ್ಟಿ ಹಾಕಿಕೊಳ್ಳಬೇಕು. ಇಲ್ಲದಿದ್ದಲ್ಲಿ ಗೋಶಾಲೆಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಅವರು ತಿಳಿಸಿದ್ದಾರೆ. ಪಟ್ಟಣದಲ್ಲಿ ಬಿಡಾಡಿಯಾಗಿ ಅಲೆಯುತ್ತಿರುವ ಜಾನುವಾರುಗಳೊಂದಿಗೆ ತಮ್ಮ ಸ್ವಂತ ದನಗಳನ್ನು ರಸ್ತೆಗೆ ಬಿಟ್ಟಿದ್ದರಿಂದ ವ್ಯಾಪಾರಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದ್ದು, ಮುಖ್ಯ ರಸ್ತೆಗಳಲ್ಲಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುತ್ತಿವೆ ಎಂದು ಸಾರ್ವಜನಿಕರಿಂದ ದೂರು ಬಂದಿದ್ದು, ಮುಂದಿನ 05 ದಿನಗಳೊಳಗಾಗಿ ತಮ್ಮ ಜಾಗದಲ್ಲಿ ಜಾನುವಾರುಗಳನ್ನು ಕಟ್ಟಿಹಾಕಿಕೊಳ್ಳಬೇಕು. ಇಲ್ಲದಿದ್ದಲ್ಲಿ ಜಾನುವಾರುಗಳನ್ನು ಗೋಶಾಲೆಗಳಿಗೆ ಸ್ಥಳಾಂತರಿಸಲಾಗುವುದು. ಈ ಕುರಿತು ಯಾರಾದರೂ ತಂಟೆ-ತಕರಾರು ಮಾಡಿದಲ್ಲಿ ಅದಕ್ಕೆ ಪುರಸಭೆಯು ಯಾವುದೇ ರೀತಿಯಿಂದ ಹೊಣೆಯಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ