ಶುಕ್ರವಾರ, ಜುಲೈ 28, 2023

ಕೃಷಿ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಅಹ್ವಾನ

ಬಳ್ಳಾರಿ,ಜು.28(ಕರ್ನಾಟಕ ವಾರ್ತೆ): ಕೃಷಿಯಲ್ಲಿ ರೈತರನ್ನು ಪೋತ್ಸಾಹಿಸಲು ಹಾಗೂ ಕೃಷಿಯತ್ತಾ ಆಕರ್ಷಿಸಲು ಕೃಷಿ ಪ್ರಶಸ್ತಿ ಮತ್ತು ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಮತ್ತು ರೈತ ಮಹಿಳೆಯರಿಂದ ಅರ್ಜಿ ಅಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಾದ ನೀರಾವರಿ ಬೆಳೆ ಭತ್ತ ಮತ್ತು ಮಳೆಯಾಶ್ರಿತ ಬೆಳೆಗಳಾದ ರಾಗಿ, ಮುಂಗಾರು ಜೋಳ, ಶೇಂಗಾ, ತೊಗರಿ ಪೂರ್ಣ ಬೆಳೆ, ಹಿಂಗಾರಿ ಜೋಳ, ಸೂರ್ಯಕಾಂತಿ, ಕಡಲೆ ಬೆಳೆಗಳಿಗೆ ಕೃಷಿ ಪ್ರಶಸ್ತಿ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪಂಡಿತಾ ಪ್ರಶಸ್ತಿ ಯೋಜನೆಯಡಿ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡಿರುವ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮುಂಗಾರು ಹಂಗಾಮಿನ ಬೆಳೆಗಳಿಗೆ ಆಗಸ್ಟ್ 31 ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ನವೆಂಬರ್ 30 ಅಂತಿಮ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ