ಶುಕ್ರವಾರ, ಜುಲೈ 14, 2023
ಜು.15 ರಂದು ಬಳ್ಳಾರಿ ನಗರ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಜು.14(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-1 ಮತ್ತು 2 ರ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆ ಹಾಗೂ SOP (Standard of Performance) ಬಗೆಗಿನ ಜಾಗೃತಿ ಸಭೆಯನ್ನು ಜುಲೈ 15 ರಂದು ಬೆಳಗ್ಗೆ 11 ಕ್ಕೆ ನಗರ ಉಪ-ವಿಭಾಗ ಕಚೇರಿಯಲ್ಲಿ ನಡೆಸಲಾಗುವುದು.
ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಇಂಜಿನಿಯರ್ ಈ.ಟಿ.ಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ