ಬುಧವಾರ, ಜುಲೈ 26, 2023

ಕಲ್ಯಾಣ ಸಂಘಟಿಕರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.26(ಕರ್ನಾಟಕ ವಾರ್ತೆ): ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ 14 ಕಲ್ಯಾಣ ಸಂಘಟಿಕರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಭೂಸೇನೆಯ ಕೇವಲ ಜೆಸಿಒ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನÀ ರ್ಯಾಂಕ್‍ನಿಂದ ನಿವೃತಿ ಹೊಂದಿರುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು (ಅರ್ಜಿ ನಮೂನೆ–1) ಸರ್ಕಾರಿ ಮುದ್ರಣಾಲಯದಲ್ಲಿ ಪಡೆದುಕೊಂಡು ಭರ್ತಿ ಮಾಡಿ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, #58, ಫೀಲ್ಢ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ, ಫೀಲ್ಢ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025 ಈ ವಿಳಾಸಕ್ಕೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 06 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಎಸ್ ಲೋಲಾಕ್ಷ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ