ಸೋಮವಾರ, ಜುಲೈ 31, 2023
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ):
ನಗರದ ಕೆಕೆಆರ್ಟಿಸಿ ಬಸ್ ನಿಲ್ದಾಣದಲ್ಲಿ ಜು.22 ರಂದು ಅನಾಮಧೇಯ ವ್ಯಕ್ತಿಯು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ವಿಮ್ಸ್ ಆಸ್ಪತ್ರೆಯ ಶೀತಲೀಕೃತ ಶವಗಾರ ಕೋಣೆಯಲ್ಲಿರಿಸಿದೆ. ಮೃತನ ಸಂಬಂಧಿಕರು ತಿಳಿದಿರುವುದಿಲ್ಲ. ವಾರಸುದಾರರ ಪತ್ತೆಗಾಗಿ ಸಹಕರಿಸಬೇಕು ಎಂದು ಬ್ರೂಸ್ಪೇಟೆ ಪೊಲೀಸ್ಠಾಣೆಯ ಸಹಾಯಕ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಮೃತನ ಚಹರೆ: ಅಂದಾಜು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಸಾಧಾರಣ ಕಪ್ಪು ಮೈಬಣ್ಣ, ಕೋಲುಮುಖ, ತಲೆಯಲ್ಲಿ ಒಂದೂವರೆ ಇಂಚಿನ ಬಿಳಿ ಮಿಶ್ರಿತ ಕಪ್ಪು ಕೂದಲು, ಬಿಳಿ ಮಿಶ್ರಿತ ಕಪ್ಪು ಮೀಸೆ,ಗಡ್ಡ ಹೊಂದಿರುತ್ತಾನೆ.
ಎಡಮೊಣಕೈ ವರೆಗೆ ಕೈ ಇರುವುದಿಲ್ಲ, ಬಿಳಿ ಬಣ್ಣದ ಮಾಸಿದ ತುಂಬು ತೋಳಿನ ಅಂಗಿ, ನೀಲಿ ಬಣ್ಣದ ಬನಿಯನ್, ನೀಲಿ ಬಣ್ಣದ ಚೌಕಳಿಯ ಲುಂಗಿ ಧರಿಸಿರುತ್ತಾನೆ.
ಮೃತನ ಸಂಬಂಧಿಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100, ಬ್ರೂಸ್ಪೇಟೆ ಪೊಲೀಸ್ಠಾಣೆ ದೂ.08392-272022, ಪಿಎಸ್ಐ ಮೊ.9480803081 ಹಾಗೂ ಠಾಣೆಯ ಪಿಐ ಮೊ.9480803045 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ