ಶುಕ್ರವಾರ, ಜುಲೈ 28, 2023
ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಅನುಷ್ಟಾನಕ್ಕೆ ಮಹಾನಗರ ಪಾಲಿಕೆಯಿಂದ ಅಗತ್ಯ ಸಹಕಾರ: ಮೇಯರ್ ಡಿ.ತ್ರಿವೇಣಿ
ಬಳ್ಳಾರಿ,ಜು.28(ಕರ್ನಾಟಕ ವಾರ್ತೆ):
ಮಕ್ಕಳಿಗೆ ಬಾಲ್ಯದಲ್ಲಿ ಕಾಡುವ ಮಾರಕ ರೋಗಗಳ ನಿಯಂತ್ರಣಕ್ಕೆ ನೀಡುವ ಲಸಿಕೆಯನ್ನು ವಂಚಿತ, ಬಿಟ್ಟು ಹೊದ ಮಕ್ಕಳನ್ನು ಹುಡುಕಿ ಲಸಿಕೆ ಹಾಕುವ ತೀವ್ರತರ ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಮಹಾನಗರ ಪಾಲಿಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಮಹಾಪೌರರಾದ ಡಿ.ತ್ರಿವೇಣಿ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇಂದ್ರಧನುಷ್ ಲಸಿಕಾ ಕಾರ್ಯಕ್ರಮದ ಅಂಗವಾಗಿ ಗುರುವಾರದಂದು ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೆÇೀರ್ಸ್ ಸಭೆಯಲ್ಲಿ ಅವರು ಮಾತನಾಡಿದರು.
ನಗರ ಕಾರ್ಯಪಡೆ ಸಮಿತಿ ಸಭೆಯಲ್ಲಿ ಜಂಟಿಯಾಗಿ ನಗರದ ಎಲ್ಲ ವಾರ್ಡಗಳಲ್ಲಿ ಪಾಲಿಕೆಯ ಸದಸ್ಯರ ಸಹಕಾರದಿಂದ ಮನವೊಲಿಸುವ ನಿಟ್ಟಿನಲ್ಲಿ ಲಸಿಕಾ ದಿವಸ ಸಿಬ್ಬಂದಿಯ ನಿಯೋಜನೆ, ತ್ಯಾಜ್ಯ ವಿಲೇವಾರಿ ವಾಹನದ ಮೂಲಕ ಜಾಗೃತಿ ನೀಡುವ ಕಾರ್ಯ ಕೈಗೊಳ್ಳಲಾಗುವುದು, ಇನ್ನೂ ಹೆಚ್ಚಿನ ಸಮನ್ವಯಕ್ಕಾಗಿ ಎಲ್ಲ ವಾರ್ಡಗಳ ಸದಸ್ಯರ ಸಭೆ ಕರೆಯಲಾಗುವುದು ಎಂದು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಬಳ್ಳಾರಿ ವಲಯ ಸರ್ವೇಕ್ಷಣಾಧಿಕಾರಿ ಡಾ.ಆರ್.ಎಸ್.ಶ್ರೀಧರ ಅವರು ಮಾತನಾಡಿ, ರಾಷ್ಟ್ರ ಮಟ್ಟದಲ್ಲಿ ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ತಲಾ ಏಳು ದಿನಗಳಂತೆ ಲಸಿಕೆ ವಂಚಿತ ಮಕ್ಕಳಿಗೆ ಮಾರಕ ರೋಗಗಳಾದ ಗಂಟಲುಮಾರಿ, ನಾಯಿಕೆಮ್ಮು, ಡಿಫ್ತೀರಿಯಾ, ಹೆಪಟೈಟಿಸ್ ಬಿ, ಹಿಬ್, ಧನುರ್ವಾಯು ಹಾಗೂ ಬಾಲ ಕ್ಷಯ ರೋಗ, ದಡಾರ ರುಬೆಲ್ಲಾ, ನಿಮೊಕಾಕಲ್ ನಿಮೋನಿಯ, ರೋಟಾ ವೈರಸ್, ಮೆದಳು ಜ್ವರ ರೋಗಗಳಿಗೆ ಲಸಿಕೆಯನ್ನು ಕೊಳಚೆ ಪ್ರದೇಶ, ವಲಸೆ ಪ್ರದೇಶ, ಕಡಿಮೆ ಲಸಿಕೆ ಪ್ರಮಾಣವಾದ ಪ್ರದೇಶಗಳಲ್ಲಿ ಹಾಕಲಾಗುವುದು ತಪ್ಪದೇ ಎಲ್ಲರೂ ಇದರ ಸದುಪಯೋಗ ಪಡೆಯಬೇಕು ಎಂದು ವಿನಂತಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಉಪ ಮಹಾಪೌರರಾದ ಬಿ.ಜಾನಕಿ, ಪಾಲಿಕೆ ಆಯುಕ್ತ ರುದ್ರೇಶ್.ಎಸ್.ಎನ್, ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ.ಅನೀಲ್ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಪಾಲಿಕೆಯ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ನಗರ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಪಾಲಿಕೆಯ ಪರಿಸರ ಅಭಿಯಂತರರು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)






ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ