ಗುರುವಾರ, ಜುಲೈ 20, 2023
ಮರು ವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೊಂದಣಿಗೆ ಆಹ್ವಾನ
ಬಳ್ಳಾರಿ,ಜು.20(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ(RWBCIS)ಗೆ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೊಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರಕೃತಿ ವಿಕೋಪಗಳು / ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ (R-WBCIS) ಮುಖ್ಯ ಉದ್ದೇಶವಾಗಿದೆ.
ವಿಮಾ ಯೋಜನೆಯಡಿ ಒಳಪಡುವ ಬೆಳೆಗಳು ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳಾಗಿವೆ.
*ಹಸಿ ಮೆಣಸಿನಕಾಯಿ:* ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್ಗೆ ವಿಮಾ ಮೊತ್ತ ರೂ.71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.3550 ಆಗಿರುತ್ತದೆ.
*ದಾಳಿಂಬೆ:* ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6350 ಆಗಿರುತ್ತದೆ.
ರೈತರು ಅಗತ್ಯ ದಾಖಲೆಗಳೊಂದಿಗೆ ಎರಡು ಬೆಳೆಗಳ ವಿಮೆಗೆ ನೊಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ.9480257282, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ.9740934208, ಕಂಪ್ಲಿ ಮತ್ತು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396 -222066 ಹಾಗೂ ಮೊ.9448910277 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ