ಸೋಮವಾರ, ಜುಲೈ 17, 2023
ಜು.27 ರಂದು ನಿಧಿ ಅಪ್ಕೆ ನಿಕಟ್ ಕಾರ್ಯಕ್ರಮ
ಬಳ್ಳಾರಿ,ಜು.17(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಜಿಲ್ಲಾ ಪ್ರಾದೇಶಿಕ ಕಚೇರಿಯ ಉದ್ಯೋಗಿಗಳ ಭವಿಷ್ಯನಿಧಿ ಮತ್ತು ಪಿಂಚಣಿ ಇತ್ಯಾದಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ನಿವಾರಿಸಲು ಜುಲೈ 27 ರಂದು ಬೆಳಗ್ಗೆ 9ರಿಂದ ಸಂಜೆ 6 ರವರೆಗೆ ‘ನಿಧಿ ಆಪ್ಕೆ ನಿಕಟ್' ಕಾರ್ಯಕ್ರಮವನ್ನು ಬಳ್ಳಾರಿ ತಾಲೂಕಿನ ಸಿಡಗಿನಮೋಳ ಗ್ರಾಮದ ಜಾನಕಿ ಕಾರ್ಪ್ ಪ್ರೈವೆಟ್ ಲಿಮಿಟೆಡ್ನಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವು ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರ ಕುಂದುಕೊರತೆ ಪರಿಹಾರ ಮತ್ತು ಮಾಹಿತಿ ವಿನಿಮಯಕ್ಕೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ಹಾಗೂ ಉದ್ಯೋಗದಾತರ ಕರ್ತವ್ಯಗಳು, ಜವಾಬ್ದಾರಿಗಳ ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆಗಳ ಮಾಹಿತಿ ಒದಗಿಸುವುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ:08392-226304ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ