ಸೋಮವಾರ, ಜುಲೈ 31, 2023

ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆ ನೊಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗೆ ನೊಂದಾಯಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳೆ ಸ್ಪರ್ಧೆಗೆ ನೀರಾವರಿ ಬೆಳೆ ಭತ್ತ ಹಾಗೂ ಮಳೆ ಆಧಾರಿತ ಬೆಳೆಗಳಾದ ರಾಗಿ, ಮುಂಗಾರು ಜೋಳ, ಶೇಂಗಾ, ತೊಗರಿ ಪೂರ್ಣ ಬೆಳೆ, ಹಿಂಗಾರಿ ಜೋಳ, ಸೂರ್ಯಕಾಂತಿ ಮತ್ತು ಕಡಲೆ ಬೆಳೆಗಳಿಗೆ ಮಾತ್ರ ರೈತರು ಅರ್ಜಿಯನ್ನು ನೊಂದಾಯಿಸಲು ಅವಕಾಶವಿರುತ್ತದೆ. ಪ್ರವೇಶ ಶುಲ್ಕವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ರೂ.25 ಮತ್ತು ಸಾಮಾನ್ಯ ವರ್ಗದವರಿಗೆ ರೂ.100 ಇರುತ್ತದೆ. ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ನೊಂದಾಯಿಸಲು ಕೊನೆಯ ದಿನ ಆಗಸ್ಟ್ 31, ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ನೊಂದಾಯಿಸಲು ಕೊನೆಯ ದಿನ ನವೆಂಬರ್ 30 ಆಗಿರುತ್ತದೆ. ರೈತರು ಬೆಳೆ ಸ್ಪರ್ಧೆಗೆ ನೊಂದಾಯಿಸಲು ತಾಲ್ಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ