ಗುರುವಾರ, ಆಗಸ್ಟ್ 31, 2023
ಬಳ್ಳಾರಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಒತ್ತು 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ (ಫೋನ್-ಇನ್) ಕಾರ್ಯಕ್ರಮ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪಾರದರ್ಶಕ ಪರೀಕ್ಷೆ/ನಕಲು ತಡೆಯುವ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆಯು ವಿಶೇಷ ಒತ್ತು ನೀಡಿದೆ. ಇದಕ್ಕಾಗಿ ವ್ಯಾಸಂಗ ಮಾಡುತ್ತಿರುವ 10ನೇ ತರಗತಿ ಮಕ್ಕಳಿಗೆ ಸಹಾಯವಾಣಿ (ಫೋನ್-ಇನ್) ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹನುಮಕ್ಕ ಅವರು ತಿಳಿಸಿದ್ದಾರೆ.
ವಿಷಯವಾರು ಕ್ಲಿಷ್ಟಕರವಾದ ಅಂಶಗಳ ಬಗ್ಗೆ ಇರುವ ಸಂದೇಹ, ಗೊಂದಲ ಹಾಗೂ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಸಹಾಯವಾಣಿ ಸ್ಥಾಪಿಸಲಾಗಿದೆ. ಸಹಾಯವಾಣಿ ಕೇಂದ್ರದಲ್ಲಿ ಪ್ರತಿ ವಿಷಯಕ್ಕೆ ಸಂಬಂಧಿಸಿದ ಸಂಪನ್ಮೂಲ ಶಿಕ್ಷಕರನ್ನು ನೇಮಿಸಲಾಗಿದೆ. ಸಹಾಯವಾಣಿಗೆ ಶಾಲಾ ವೇಳೆಯಲ್ಲಿ ಸಂಪರ್ಕಿಸಿದಲ್ಲಿ ವಿಷಯವಾರು ಶಿಕ್ಷಕರು ತಮ್ಮ ಸಂದೇಹಗಳನ್ನು ಬಗೆಹರಿಸಲಿದ್ದಾರೆ.
*ವಿಷಯವಾರು ಸಂಪನ್ಮೂಲ ಶಿಕ್ಷಕರು ಮತ್ತು ಅವರ ಮೊಬೈಲ್ ವಿವರ:*
ಇಂಗ್ಲಿಷ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಸೋಮವಾರ ಶಾಲಾ ನಡೆಯುವ ವೇಳೆಯಲ್ಲಿ ಮಾಹಿತಿಗಾಗಿ ಬಳ್ಳಾರಿ ಬಾಪೂಜಿನಗರ ಸರ್ಕಾರಿ ಪ್ರೌಢಶಾಲೆಯ ಮಧುಸೂಧನ್ ಅವರ ಮೊ:8792134436, ಅಂದ್ರಾಳ್ ಸರ್ಕಾರಿ ಪ್ರೌಢಶಾಲೆಯ ವಿಜಯಭೂಷಣ ಜೋಶಿ ಅವರ ಮೊ:9844394840, ಬಳ್ಳಾರಿ ವಿಡಿಎಚ್ಎಲ್ ಬಿ.ಆರ್.ಮಹೇಶ ಅವರ ಮೊ:9448632895, ಮಿಲ್ಲರಪೇಟೆಯ ಸರ್ಕಾರಿ ಉರ್ದು ಪ್ರೌಢಶಾಲೆಯ ಅನಿತಾ ಮೊ:64364652124. ತಂಡದ ಮೇಲ್ವಿಚಾರಕರಾದ ಶಿಕ್ಷಣಾಧಿಕಾರಿ ಹಾಗೂ ಡಿ.ವೈ.ಪಿ.ಸಿ, ಎಸ್.ಎಸ್.ಕೆ ನೋಡಲ್ ಅಧಿಕಾರಿ ಇಂದ್ರಾಣಮ್ಮ ಮೊ.9740113925 ಇವರಿಗೆ ಸಂಪರ್ಕಿಸಬಹುದು.
ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಮಂಗಳವಾರ ಶಾಲಾ ನಡೆಯುವ ವೇಳೆಯಲ್ಲಿ ಬಸಮ್ಮ ಅನುದಾನಿತ ಪ್ರೌಢಶಾಲೆಯ ಬಿ.ಎಂ.ನಾಗರಾಜಯ್ಯ ಮೊ:9986861964, ಡಿ.ಅಂತಾಪುರ ಸರ್ಕಾರಿ ಪ್ರೌಢಶಾಲೆಯ ಕೆ.ವಿ.ಆನಂದ ಮೊ:9886680134, ಹಿರಾಳ್ಕುಡಂ ಸರ್ಕಾರಿ ಉರ್ದು ಪ್ರೌಢಶಾಲೆಯ ಸೈಯದ್ ಇರ್ಫಾನ್ ಮೊ.9481047568, ಕುರುಗೋಡ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಅರುಣ್ ಮೊ.9844080610, ಕೊಳಗಲ್ ಸರ್ಕಾರಿ ಪ್ರೌಢಶಾಲೆಯ ಜಯರಾಜ್.ಕೆ.ಆರ್ ಮೊ.9845002181, ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಗಣಿತ ವಿಷಯ ಪರಿವೀಕ್ಷಕ ಎಂ.ಬಸವರಾಜ ಮೊ.7795353576 ಇವರಿಗೆ ಸಂಪರ್ಕಿಬಹುದು.
ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಬುಧವಾರ ಎಸ್ಇಎಸ್ ಬಾಲಕೀಯರ ಪ್ರೌಢಶಾಲೆಯ ಕಲ್ಲಯ್ಯ ಹಿರೇಮಠ ಮೊ:9164516695, ಕುರುಗೋಡು ಸರ್ಕಾರಿ ಬಾಲಕೀಯರ ಪ್ರೌಢಶಾಲೆಯ ಶ್ರೀಕಾಂತ ಮೊ:9481436365, ಹಗರಿಫಾರಂ ಸರ್ಕಾರಿ ಪ್ರೌಢಶಾಲೆಯ ಹೆಚ್.ಈಶ್ವರಪ್ಪ ಮೊ:9449300605, ಜಾನೆಕುಂಟೆ ಸರ್ಕಾರಿ ಪ್ರೌಢಶಾಲೆಯ ರಾಜಶೇಖರ ಗೌಡ.ಹೆಚ್ ಮೊ.9481415847, ತೋರಣಗಲ್ಲು ಸರ್ಕಾರಿ ಪ್ರೌಢಶಾಲೆಯ ದೊಡ್ಡಬಸವ ಮೊ.9110228893, ಎಂ.ಸೂಗೂರು ಸರ್ಕಾರಿ ಪ್ರೌಢಶಾಲೆಯ ದೇವಪ್ಪ ಮೊ.998075610, ಮಿಲ್ಲರಪೇಟೆಯ ಸರ್ಕಾರಿ ಉರ್ದು ಪ್ರೌಢಶಾಲೆಯ ಜಮೇದಾರ್.ಆರ್.ಕೆ ಮೊ.9480993366 ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಹೆಚ್.ವೀರೇಶಪ್ಪ ಮೊ.9945681455 ಗೆ ಸಂಪರ್ಕಿಸಬಹುದು.
ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಗುರುವಾರ ಸಂಡೂರು ಛತ್ರಪತಿ ಶಿವಾಜಿ ವಿದ್ಯಾಮಂದಿರ ವಿಶ್ವನಾಥ.ಎಂ. ಮೊ. 8660768012, ಬಳ್ಳಾರಿಯ ಕಪಗಲ್ ರಸ್ತೆಯ ಪ್ರೌಢಶಾಲೆಯ ವಿಶ್ವನಾಥ ಮೊ:9591566856, ಹಗರಿಫಾರಂ ಸರ್ಕಾರಿ ಪ್ರೌಢಶಾಲೆಯ ಗಾದಿಲಿಂಗಪ್ಪ ಮೊ:9481435994, ಅನುದಾನಿತ ಉರ್ದು ಪ್ರೌಢಶಾಲೆಯ ವಾಯಿದಾ ಗಾಲಿಬ್ ಮೊ.9380565461, ದಮ್ಮೂರು ಸರ್ಕಾರಿ ಪ್ರೌಢಶಾಲೆಯ ಸುಮ ಮೊ.9663592157, ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಎಪಿಸಿ, ಎಸ್ಎಸ್ಕೆಯ ಹೆಚ್.ವಿ.ಶಿವಾಲಿಂಗಾರೆಡ್ಡಿ ಮೊ.9449448187 ಇವರಿಗೆ ಸಂಪರ್ಕಿಸಬಹುದು.
ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶುಕ್ರವಾರ ದೋಣಿಮಲೈ ಸರ್ಕಾರಿ ಪ್ರೌಢಶಾಲೆಯ ನಾಗರಾಜ ಮೊ.9902779033, ಎಂ.ಸೂಗುರು ಸರ್ಕಾರಿ ಪ್ರೌಢಶಾಲೆಯ ರವಿ.ಆರ್ ಮೊ.9880019171, ಕೋಳುರು ಸರ್ಕಾರಿ ಪ್ರೌಢಶಾಲೆಯ ಹುಲೆಪ್ಪ ಮೊ.9483480302, ಮಿಲ್ಲರಪೇಟೆ ಸರ್ಕಾರಿ ಉರ್ದು ಪ್ರೌಢಶಾಲೆಯ ಹನುಮಪ್ಪ ಮೊ.9008474366, ಬಳ್ಳಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹರಿಪ್ರಸಾದ್ ಮೊ.8722517436. ತಂಡದ ಮೇಲ್ವಿಚಾರಕ ಉಪನಿರ್ದೇಶಕರ ಕಚೇರಿಯ ಕನ್ನಡ ವಿಷಯದ ಪರಿವೀಕ್ಷಕ ಎ.ಕೆ.ಸತ್ಯನಾರಾಯಣ ಮೊ.9740738762 ಗೆ ಸಂಪರ್ಕಿಸಬಹುದು.
ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶನಿವಾರ ಕುಡಿತಿನಿ ಪ್ರೌಢಶಾಲೆಯ ಮೊಹ್ಮದ ಜಾಫರ್ ಸಾದಿಕ್ ಮೊ:9945721814, ರೇಡಿಯೋ ಪಾರ್ಕ ಸರ್ಕಾರಿ ಪ್ರೌಢಶಾಲೆಯ ಟಿ.ಲಕ್ಷ್ಮೀ ಮೊ:9480753806, ಬಂಡಿಹಟ್ಟಿ ಪ್ರೌಢಶಾಲೆಯ ರಾಮತುಳಸಿ ಮೊ:9880842333, ಬಳ್ಳಾರಿ ಎಸ್.ಆರ್.ಕಾಲೋನಿ ಸರಕಾರಿ ಪ್ರೌಢಶಾಲೆಯ ಮೆಹಬೂಬ್ ಬಾಷಾ ಮೊ:9739458747. ತಂಡದ ಮೇಲ್ವಿಚಾರಕ ಸರ್ಕಾರಿ ಪ್ರೌಢ ಶಾಲೆ ಸಿ.ಬಿ ಮುಖ್ಯಗುರುಗಳಾದ ಶಿವಕುಮಾರ ಅವರ ಮೊ.9916992857 ಗೆ ಸಂಪರ್ಕಿಸಬಹುದು.
ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ದೂ.08392-268239 ಹಾಗೂ ಮೊ.9448999329 ಗೆ ಸಂಪರ್ಕಿಸಬಹುದು.
ವಿದ್ಯಾರ್ಥಿಗಳು ವಿಷಯಗಳ ಕುರಿತು ತಮಗಿರುವ ಸಂದೇಹಗಳ ಬಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು. ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮವಾಗಿ ಬರಲು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯಶಿಕ್ಷಕರು, ಶಿಕ್ಷಕರುಗಳು ಸೇರಿದಂತೆ ಎಲ್ಲರು ಶ್ರಮಿಸಬೇಕು ಮತ್ತು ಸಹಕಾರವೂ ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ