ಬುಧವಾರ, ಆಗಸ್ಟ್ 9, 2023

ಡಿ.ದೇವರಾಜು ಅವರ ಜನ್ಮದಿನಾಚರಣೆ ನಿಮಿತ್ತ ಪೂರ್ವಭಾವಿ ಸಭೆ ಆ.11ರಂದು

ಬಳ್ಳಾರಿ,ಆ.09(ಕರ್ನಾಟಕ ವಾರ್ತೆ): ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜು ಅವರ 108ನೇ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಗಸ್ಟ್ 11 ರಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುರೇಶ್‍ಬಾಬು ಅವರು ತಿಳಿಸಿದ್ದಾರೆ. ಸಭೆಗೆ ಎಲ್ಲಾ ಜನಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಕೋರಿದ್ದು, ಸಂಘ-ಸಂಸ್ಥೆಯವರು, ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಹಾಜರಾಗಲು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ