ಬುಧವಾರ, ಆಗಸ್ಟ್ 16, 2023
ನ್ಯೂ ಇಂಡಿಯಾ-ಕ್ಲೀನ್ ಇಂಡಿಯಾ; ಸೆಲ್ಫಿಬೂತ್
ಬಳ್ಳಾರಿ,ಆ.16(ಕರ್ನಾಟಕ ವಾರ್ತೆ):
ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆಯಿಂದ ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ನ್ಯೂ ಇಂಡಿಯಾ-ಕ್ಲೀನ್ ಇಂಡಿಯಾ ಕುರಿತು ಸೆಲ್ಫಿಬೂತ್ ನ್ನು ಸೋಮವಾರ ಆಯೋಜನೆ ಮಾಡಲಾಗಿತ್ತು.
ವಿಭಾಗೀಯ ವೈದ್ಯಾಧಿಕಾರಿ ಡಾ.ವಿಶ್ವನಾಥ ಅವರು ಸೆಲ್ಫಿಬೂತ್ನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿಯವರ ಆಶಯದಂತೆ ಸ್ವಚ್ಛಭಾರತದ ಕನಸಿನಂತೆ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿರಲು ಇಂತಹ ಜಾಗೃತಿ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದರು. ಸಾರ್ವಜನಿಕರು ಸೆಲ್ಫಿ ತೆಗೆದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬಳಸಿಕೊಳ್ಳುವಂತೆ ಮಾನವಿ ಮಾಡಿದರು.
ಈ ಸಂದರ್ಭದಲ್ಲಿ ಸ್ಟೇಷನ್ ಮಾಸ್ಟರ್ ನಾಗೇಶ್ ಬಾಬು ಶರ್ಮಾ ಹಾಗೂ ಇತರರು ಹಾಜರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ