ಗುರುವಾರ, ಸೆಪ್ಟೆಂಬರ್ 14, 2023

ತೆಕ್ಕಲಕೋಟೆ: ಸೆ.16ರಂದು ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ

ಬಳ್ಳಾರಿ,ಸೆ.14(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂನ ಉಪವಿಭಾಗ ವ್ಯಾಪ್ತಿಯ ತೆಕ್ಕಲಕೋಟೆಯ ಜೆಸ್ಕಾಂ ಶಾಖಾ ಕಚೇರಿಯಲ್ಲಿ ಸೆ.16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01ರವರೆಗೆ ಜೆಸ್ಕಾಂ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ. ಸಿರುಗುಪ್ಪ ಕಾರ್ಯ ಮತ್ತು ಪಾಲನೆ ಉಪವಿಭಾಗ ಜೆಸ್ಕಾಂ ವ್ಯಾಪ್ತಿಗೆ ಸಂಬಂಧಿಸಿದಂತೆ ಸಮಸ್ಯೆ ಇರುವ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ