ಬುಧವಾರ, ಸೆಪ್ಟೆಂಬರ್ 13, 2023

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ನೂತನ ಕುಲಸಚಿವರಾಗಿ ಎಸ್.ಎನ್.ರುದ್ರೇಶ್ ಅಧಿಕಾರ ಸ್ವೀಕಾರ

ಬಳ್ಳಾರಿ,ಸೆ.13(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆಎಎಸ್ ಅಧಿಕಾರಿಯಾದ ರುದ್ರೇಶ್.ಎಸ್.ಎನ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಅವರು ಈ ಹಿಂದೆ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕುಲಸಚಿವರಾಗಿದ್ದ ಪ್ರೊ.ಎಸ್.ಸಿ.ಪಾಟೀಲ್ ಅವರು ರುದ್ರೇಶ್.ಎಸ್.ಎನ್ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರ ಮಾಡಿದರು ಎಂದು ವಿವಿ ಪ್ರಕಟಣೆ ತಿಳಿಸಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ