ಶುಕ್ರವಾರ, ಸೆಪ್ಟೆಂಬರ್ 29, 2023
ಮೃತ ಸಿರಿಯ ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಸೆ.29(ಕರ್ನಾಟಕ ವಾರ್ತೆ):
ತೋರಣಗಲ್ಲು ಪೆÇಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಿವ್ಯಜ್ಯೋತಿ ಫ್ಯಾಕ್ಟರಿಯಲ್ಲಿ ಸ್ಪಾಂಜ್ ಐರನ್ ಲೋಡ್ ಆದ ನಂತರ ಫ್ಯಾಕ್ಟರಿಯ ಕಾಂಪೌಂಡ್ ಒಳಗೆ ಗೇಟ್ ಬಳಿ ನಿಲ್ಲಿಸಿ, ಲಾರಿ ಕ್ಲೀನರ್ ಆಗಿದ್ದ ಸಿರಿ, ಈತನು ಲಾರಿಯ ಕ್ಯಾಬಿನ್ ಮೇಲೆ ಹತ್ತಿ ತಾಡಪಾಲು ಹೊದಿಸಲು ಹೋಗಿ ತಾಡಪಾಲನ್ನು ತೆಗೆಯುತ್ತಿದ್ದಾಗ ಏಕಾಏಕಿ ಲಾರಿಯ ಕ್ಯಾಬಿನ್ ಮೇಲಿಂದ ಕೆಳಗೆ ಬಿದ್ದಾಗ ಆತನ ತಲೆಗೆ ತೀವ್ರ ರಕ್ತಗಾಯವಾಗಿದ್ದು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಫ್ಯಾಕ್ಟರಿಯ ಕ್ಯಾಂಪರ್ನಲ್ಲಿ ಕರೆದುಕೊಂಡು ಹೋಗಿ ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಮೃತ ಸಿರಿಯ ವಾರಸುದಾರರ ಮಾಹಿತಿ ತಿಳಿದಿರುವುದಿಲ್ಲ. ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ ದೂ.083922-258100 ಗೆ ಸಂಪರ್ಕಿಸಬಹುದು ಎಂದು ತೋರಣಗಲ್ಲು ಪೆÇಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ