ಬುಧವಾರ, ಸೆಪ್ಟೆಂಬರ್ 27, 2023
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ: ಐದು ದಿನಗಳ ಕಾರ್ಯಾಗಾರ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “ರಿಸರ್ಚ್ ಮೆಥೋಡೊಲಾಜಿ, ರಿಸರ್ಚ್ ಪಬ್ಲಿಕೇಷನ್ಸ್ ಅಂಡ್ ಎಥಿಕ್ಸ್” “Research Methodology, Research Publications and Ethics)” ಎಂಬ ವಿಷಯದ ಕುರಿತು ಅ.03 ರಿಂದ 07ರವರೆಗೆ ಐದು ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ಅವರು ತಿಳಿಸಿದ್ದಾರೆ.
ಕಾರ್ಯಾಗಾರವನ್ನು ಅಕಾಡೆಮಿ ಕಚೇರಿಯಲ್ಲಿ (ಪೆÇ್ರ.ಯು.ಆರ್.ರಾವ್ ವಿಜ್ಞಾನ ಭವನ, ಮೇ.ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ಇಲ್ಲಿ ಆಯೋಜಿಸಿದೆ.
ಕಾರ್ಯಾಗಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಈ ಕಾರ್ಯಾಗಾರವು ಸ್ನಾತಕೋತ್ತರ ವಿದ್ಯಾರ್ಥಿಗಳು ಅಧ್ಯಾಪಕರು ಹಾಗೂ ಯುವ ಸಂಶೋಧಕರಿಗೆ ಉಪಯುಕ್ತವಾಗಲಿದೆ. ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಭಾಗವಹಿಸಬಹುದು.
ಯುವ ಸಂಶೋಧನಾ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಲಿಚ್ಚಿಸುವವರು ಸೆ.30ರೊಳಗಾಗಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ http://www.kstacademy.in ಅಥವಾ ವೈಜ್ಞಾನಿಕಾಧಿಕಾರಿಯಾದ ವಿ.ಕೆ.ಶ್ರೀನಿವಾಸು ಅವರ ಮೊ.9620767819 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ