ಮಂಗಳವಾರ, ಸೆಪ್ಟೆಂಬರ್ 19, 2023

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ):
ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಗಪ್ಪ ಎನ್ನುವ 47 ವರ್ಷದ ವ್ಯಕ್ತಿಯು ಸೆ.14ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣೆಯ ಠಾಣಾಧಿಕಾರಿ ಅವರು ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಅಂದಾಜು 5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಎಡಮೊಣಕೈ ಒಳಗಡೆ “ನಾಗರತ್ನ” ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಬಿಳಿ ಗೆರೆಯುಳ್ಳ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸುಳಿವು ಸಿಕ್ಕಲ್ಲಿ ಸಿರಿಗೇರಿ ಪೊಲೀಸ್ ಠಾಣೆಯ ದೂ.08396-244426, ಮೊ.9480803056 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ