ಬುಧವಾರ, ಅಕ್ಟೋಬರ್ 18, 2023
ಸಿರುಗುಪ್ಪ: ಅ.21ರಂದು ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ಸಿರುಗುಪ್ಪ ಜೆಸ್ಕಾಂ ಉಪವಿಭಾಗದ ಕಚೇರಿ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರಿಗೆ ಇರುವಂತಹ ಸಮಸ್ಯೆಗಳನ್ನು ನಿವಾರಿಸಲು ಅ.21ರಂದು ಸಿರುಗುಪ್ಪ ಉಪವಿಭಾಗ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ.
ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಗೆ ಸಂಬಂಧಿಸಿದಂತೆ ಸಮಸ್ಯೆ ಇರುವಂತಹ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಸಿರುಗುಪ್ಪ ಜೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ