ಬುಧವಾರ, ಅಕ್ಟೋಬರ್ 11, 2023

ಯುವಕ ನಾಪತ್ತೆ

ಬಳ್ಳಾರಿ,ಅ.11(ಕರ್ನಾಟಕ ವಾರ್ತೆ): ಇಲ್ಲಿನ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿ.ರಂಗನಾಥ ಬಾಬು ಎನ್ನುವ 20 ವರ್ಷದ ಯುವಕ ಮಾ.03ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಅವರು ತಿಳಿಸಿದ್ದಾರೆ. ಚಹರೆ ಗುರುತು: 5.6 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ತೆಲುಗು, ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಚೆಕ್ಸ್ ಇರುವ ನೀಲಿ ಮತ್ತು ಆರೇಂಜ್ ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಠಾಣೆಯ ಪಿಎಐ ಮೊ.9480803082 ಹಾಗೂ ಪಿಐ ಮೊ.9480803046 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ