ಬುಧವಾರ, ನವೆಂಬರ್ 29, 2023

ಜಿಲ್ಲಾ ಮಟ್ಟದ ಯುವಜನೋತ್ಸವ ಡಿ.01ರಂದು

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವಿವೇಕಾನಂದ ಯುವಕ ಸಂಘ (ರಿ), ವಿವೇಕಾನಂದ ಯೂತ್ ಅಸೋಸಿಯೇಷನ್ (ರಿ), ರಾಮಸಾಗರ ಸ್ಥಳೀಯ ಯುವಕ ಸಂಘಗಳು ಇವರ ಸಂಯುಕ್ತಾಶ್ರಯದಲ್ಲಿ ಡಿ.01ರಂದು ಬೆಳಿಗ್ಗೆ 11ಕ್ಕೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಉಪಮಹಾಪೌರೆ ಬಿ.ಜಾನಕಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಗ್ರೇಸಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ