ಬುಧವಾರ, ನವೆಂಬರ್ 29, 2023

ಯುವಕ ಕಾಣೆ

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕು ವ್ಯಾಪ್ತಿಯ ಕಕ್ಕಬೇವಿನಹಳ್ಳಿ ಗ್ರಾಮದ ಅಗಸರ ಓಣಿ ನಿವಾಸಿ ಕೆ.ಗಣೇಶ ಎನ್ನುವ 22 ವರ್ಷದ ಯುವಕ ನ.15ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವಕ ಚಹರೆ ಗುರುತು: ಎತ್ತರ 5.6 ಅಡಿ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಆಫ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ.08392-276461, ಮೊ.9480803049 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ