ಬುಧವಾರ, ನವೆಂಬರ್ 29, 2023

ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ, ಬರ ಪರಿಹಾರ ನಮ್ಮ ಹಕ್ಕು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಹಣ ಪಾವತಿಯಾಗುತ್ತಿದೆ ರಾಜ್ಯದ ಪಾಲು ಕೇವಲ 30 ಸಾವಿರ ಕೋಟಿ ಬರುತ್ತಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಬರ ಪರಿಹಾರ ನಮ್ಮ ಹಕ್ಕು, ನ್ಯಾಯ ಸಮ್ಮತವಾಗಿ ನೀಡಬೇಕಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಳ್ಳಾರಿ, ವಿಜಯನಗರ ಜಿಲ್ಲೆಗಳ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬರ ಪರಿಹಾರ ಅನುದಾನ ಶೀಘ್ರದಲ್ಲೇ ಒದಗಿಸುವ ನಿರೀಕ್ಷೆ ಇದೆ, ಕೇಂದ್ರ ಅನುದಾನ ನೀಡದಿದ್ದರೂ ರಾಜ್ಯ ಸರ್ಕಾರ ಕುಡಿಯುವ ನೀರು, ಮೇವಿನ ನಿರ್ವಹಣೆಗೆ ಈಗಾಗಲೆ ಹಣ ಬಿಡುಗಡೆ ಮಾಡಿದೆ ಹಾಗೇ ರೈತರ ಹಿತವನ್ನು ಕಾಯಲಾಗುತ್ತದೆ ಎಂದರು. ಪ್ರಿವೆಂಟಿವ್ ಸೋಯಿಂಗ್ ಇನ್ವೋಕ್ ಹಾಗೂ ಮಧ್ಯಂತರ ಬೆಳೆ ಹಾನಿ ಪರಿಹಾರಕ್ಕೆ ಈಗಾಗಲೇ 343 ಕೊಟಿ ಬಿಡುಗಡೆಯಾಗಿದೆ. ಅದೇ ರೀತಿ ಶೀಘ್ರ ಬರ ಪರಿಹಾರ ಹಣ ಕೂಡ ರೈತರ ಖಾತೆಗೆ ನೇರವಾಗಿ ಸೇರಲಿದೆ ಅದಕ್ಕೆ ಪೂರಕವಾಗಿ ಶೇ.100ರಷ್ಟು ರೈತರ ವಿವರ ಫ್ರೂಟ್ಸ್ ಐಡಿಗೆ ದಾಖಲಿಸುವ, ಕೆ.ವೈ.ಸಿ ನೊಂದಾಯಿಸುವ ಕಾರ್ಯ ಅಭಿಯಾನದ ಸ್ವರೂಪದಲ್ಲಿ ಮಾಡಲಾಗುತ್ತಿದೆ ಎಂದರು. ರಾಜ್ಯದಲ್ಲಿ ಕೃಷಿ ಹಾಗೂ ಜಲಾನಯನ ಇಲಾಖೆ ಮೂಲಕ 1.43 ಕೊಟಿ ರೈತರಿಗೆ ಒಟ್ಟಾರೆ 5388 ಕೊಟಿ ರೂ. ಸೌಲಭ್ಯ ತಲುಪಿದಂತಾಗುತ್ತದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಮೂಲ 75 ಸಾವಿರ ಕೋಟಿ ಆರ್ಥಿಕ ನೆರವು ರಾಜ್ಯದ ಜನ ಸಾಮಾನ್ಯರಿಗೆ ನೇರವಾಗಿ ತಲುಪುತ್ತಿದೆ, ಇದು ಸಾಮಾಜಿಕ ಸಬಲೀಕರಣ ಸರ್ಕಾರದ ಮೂಲ ಆಶಯ ಎಂದರು. ಸೂಕ್ಷ್ಮ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಶೇ.90 ಸಹಾಯಧನದಲ್ಲಿ ಹನಿ ನೀರಾವರಿ ಅಥವಾ ಸ್ಪಿಂಕ್ಲೇರ್ ಸಾಧನ ವಿತರಿಸಲಾಗುತ್ತಿದ್ದು, ಅರ್ಜಿ ಸಲ್ಲಿಸಿದ 48 ಗಂಟೆಗಳಲ್ಲಿ ಮಂಜೂರು ಮಾಡಲಾಗುವುದು. ಈಗಾಗಲೇ ಎಲ್ಲಾ ಅರ್ಹರಿಗೆ ಎಸ್‍ಎಂಎಸ್ ರವಾನಿಸಲಾಗಿದೆ ಎಂದರು. *ಕಾಲಮಿತಿಯೊಳಗೆ ಯೋಜನೆ ಅನುಷ್ಠಾನಕ್ಕೆ ಸೂಚನೆ:* ಕೃಷಿ ಮತ್ತು ಜಲಾನಯನ ಇಲಾಖೆ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನ ರೈತರ ಆರ್ಥಿಕ ಮಟ್ಟ ಸುಧಾರಣೆಗೆ ಶ್ರಮಿಸಿ ಎಂದು ಕೃಷಿ ಸಚಿವರು ಸೂಚಿಸಿದ್ದಾರೆ. ಬಳ್ಳಾರಿ, ವಿಜಯನಗರ ಜಿಲ್ಲೆಗಳ ಇಲಾಖಾ ಯೋಜನೆಗಳ ಪ್ರಗತಿ ಪರಿಶೀಲಿಸಿದ ಅವರು ಫ್ರೂಟ್ಸ್ ಐಡಿ ನೋಂದಣಿ ಇನ್ನೊಂದು ವಾರದೊಳಗೆ ಪೂರ್ಣಗೊಳಿಸಬೇಕು. ಜಲಸಂರಕ್ಷಣೆ ಯೋಜನೆಗೆ ಆದ್ಯತೆ ನೀಡಿ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಿ ಎಂದರು. *ವಿಮೆ ನೋಂದಣಿ ಹೆಚ್ಚಿಸಲು ಸೂಚನೆ:* ಜಿಲ್ಲೆಯಲ್ಲಿ ಬೆಳೆ ವಿಮೆ ನೊಂದಣಿ ತುಂಬಾ ಕಡಿಮೆ ಇದ್ದು, ಇನ್ನು ಮುಂದೆ ಬೆಳೆ ವಿಮೆ ಅನುಕೂಲಗಳ ಬಗ್ಗೆ ಪ್ರತಿ ಗ್ರಾಮದಲ್ಲಿ ಜಾಗೃತಿ ಮೂಡಿಸಿ ನೊಂದಣಿ ಹೆಚ್ಚಿಸಿ ಎಂದರು. ಬೆಳೆ ವಿಮೆ ಸೌಲಭ್ಯ ಕುರಿತು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರಪತ್ರಗಳ ಮೂಲಕ ಸಾಕಷ್ಟು ಪ್ರಚಾರ ನೀಡಬೇಕು ಹಾಗೂ ರೈತರು ಬೆಳೆ ವಿಮೆ ನೋಂದಣಿಗೆ ಮನವೊಲಿಸಬೇಕು. ಇದರಿಂದ, ಬೆಳೆ ಹಾನಿಗೊಳಗಾದಗ ಸರ್ಕಾರದಿಂದ ನೆರವು ಸಿಗಲಿದೆ ಎಂದರು. ರಾಜ್ಯದಲ್ಲಿ ಈ ಬಾರಿ ರೂ.200 ಕೋಟಿ ವೆಚ್ಚದಲ್ಲಿ 32000 ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು. ಟೈ ಲ್ಯಾಂಡ್‍ಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಆದ್ಯತೆ ನೀಡಿ, ಅಲ್ಲದೆ ಇಂತಹ ಪ್ರದೇಶಗಳ ರೈತರಿಗೂ ಬೆಳೆ ಪರಿಹಾರ ಒದಗಿಸಲು ಇರುವ ತೊಡಕು ಬಗೆಹರಿಸಿ ಎಂದು ಸಚಿವರು ಸೂಚನೆ ನೀಡಿದರು. ತಪಾಸಣೆ ಹೆಚ್ಚಿಸಿ, ನಕಲಿ ಬೀಜ, ರಸಗೊಬ್ಬರ ಮಾರಾಟದ ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು. ಕೃಷಿ ನವೋದ್ಯಮಕ್ಕೆ ಪೆÇ್ರೀತ್ಸಾಹ ನೀಡಬೇಕು, ಹಾರ್ವೆಸ್ಟ್ ಹಬ್ ಸ್ಥಾಪನೆಗೂ ಆದ್ಯತೆ ನೀಡಿ ಎಂದರು. ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಮಾತನಾಡಿ, ಜಿಲ್ಲೆಯಲ್ಲಿ 382760 ರೈತರ ಪ್ಲಾಟ್ಸ್‍ಗಳಿದ್ದು, ಇಲ್ಲಿಯವರೆಗೆ 249594 ಪ್ಲಾಟ್‍ಗಳನ್ನು ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, ಶೇ.65.21 ಪ್ರಗತಿ ಸಾಧಿಸಲಾಗಿದೆ ಹಾಗೂ 133116 ಪ್ರೂಟ್ಸ್ ಪ್ಲಾಟ್‍ಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ ಎಂದು ಹೇಳಿದರು. 2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯಡಿ 4104 ರೈತರು ನೋಂದಣಿ ಮಾಡಿಸಲಾಗಿದೆ. ಹಿಂಗಾರು ಹಂಗಾಮಿನಲ್ಲಿ ಈಗಾಗಲೇ 1254 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿದ್ದು, ನೋಂದಣಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ತಹಶೀಲ್ದಾರ ಗುರುರಾಜ, ಕೃಷಿ ಉಪನಿರ್ದೇಶಕ ಕೆಂಗೇಗೌಡ, ಸಹಾಯಕ ಕೃಷಿ ನಿರ್ದೇಶಕ ದಯಾನಂದ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಹಯೋಗದೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಪಹಣಿ ಜೋಡಣೆ ಹಾಗೂ ಬೆಳೆ ವಿವೆ ಜಾಗೃತಿ ಮೂಡಿಸುವ ವಾಹನಗಳಿಗೆ ಚಾಲನೆ ನೀಡಲಾಯಿತು. *ಬರ ಪರಿಸ್ಥಿತಿ ವೀಕ್ಷಣೆ ನಡೆಸಿದ ಕೃಷಿ ಸಚಿವ ಎನ್.ಚಲುವನಾರಾಯಣ ಸ್ವಾಮಿ:* ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಕೃಷಿ ಸಚಿವ ಎನ್.ಚಲುವನಾರಾಯಣ ಸ್ವಾಮಿ ಅವರು, ಬಳ್ಳಾರಿ ತಾಲ್ಲೂಕಿನ ಹಲಕುಂದಿ ಮತ್ತು ಬೆಳಗಲ್ಲು ಗ್ರಾಮಗಳ ವ್ಯಾಪ್ತಿಯ ಬರದಿಂದ ಹಾನಿಗೊಳಗಾದ ತೊಗರಿ, ಸಜ್ಜೆ, ಸೂರ್ಯಕಾಂತಿ ಬೆಳೆಗಳ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಕುರಿತು ರೈತರು ಹಾಗೂ ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಲಕುಂದಿಯ ಮರೀಗೌಡ, ಮಲ್ಲಿಕಾರ್ಜುನ ಹಾಗೂ ಶಿವಪ್ಪ ಎಂಬ ರೈತರ ಸೂರ್ಯಕಾಂತಿ, ತೊಗರಿ ಬೆಳೆ ಜಮೀನುಗಳಿಗೆ ಭೇಟಿ ನೀಡಿ, ಹಾನಿಯಾದ ಬೆಳೆಯನ್ನು ಪರಿಶೀಲಿಸಿದ ಸಚಿವರು, ಬೆಳೆ ವಿಮೆ ಮಾಡಿಸಿಕೊಂಡಿರುವಿರಾ ಎಂದು ವಿಚಾರಿಸಿದರು. ಬೆಳೆ ವಿಮೆ ಮಾಡಿಸಿಕೊಂಡರೆ ಬೆಳೆ ಹಾನಿಯಾದಾಗ ಹಾಗೂ ಬರ ನಷ್ಟ ಹೊಂದಿದಾಗ ಸರ್ಕಾರದಿಂದ ನೆರವು ಸಿಗಲಿದೆ. ಆದ್ದರಿಂದ ಪ್ರತಿಯೊಬ್ಬ ರೈತನು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ