ಮಂಗಳವಾರ, ನವೆಂಬರ್ 21, 2023

ಅಪರಿಚಿತ ಮೃತನ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ

ಬಳ್ಳಾರಿ,ನ.21(ಕರ್ನಾಟಕ ವಾರ್ತೆ): ತಾಲ್ಲೂಕಿನ ವಿನಾಯಕ ನಗರದ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಮುಂದುಗಡೆ ಹಾದು ಹೋಗುವ ಹೆಚ್.ಎಲ್.ಸಿ ಕಾಲುವೆಯಲ್ಲಿ ಸುಮಾರು 30 ರಿಂದ 35 ವರ್ಷದ ಅಪರಿಚಿತ ವ್ಯಕ್ತಿಯು ನ.20ರಂದು ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ಕೋಲುಮುಖ, ಗೋಧಿ ಮೈಬಣ್ಣ, ಎಡ ಕೆನ್ನೆಗೆ ಹಳೆ ಗಾಯದ ಗುರುತು ಇರುತ್ತದೆ. ಮೃತನ ಮೈ ಮೇಲಿನ ಬಟ್ಟೆಗಳು: ಕ್ರೀಂ ಬಣ್ಣದ ಡಿಜೈನ್‌ನ ಫುಲ್ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಮತ್ತು ನೀಲಿ ಬಣ್ಣದ ಒಳ ಉಡುಪು ಧರಿಸಿರುತ್ತಾನೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ