ಶುಕ್ರವಾರ, ನವೆಂಬರ್ 24, 2023

ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಜೀವನ ಪ್ರಮಾಣ ಪತ್ರ

ಬಳ್ಳಾರಿ,ನ.24(ಕರ್ನಾಟಕ ವಾರ್ತೆ): ಅಂಚೆ ಇಲಾಖೆಯಿಂದ ಇಂಡಿಯ ಪೆÇೀಸ್ಟ್ ಪೇಮೆಂಟ್ ಬ್ಯಾಂಕ್‍ನ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಜೀವನ ಪ್ರಮಾಣ ಪತ್ರ ನೀಡುತ್ತಿದೆ. ಪಿಂಚಣಿದಾರರು ನಿಮ್ಮ ಸಮೀಪದ ಅಂಚೆ ಕಚೇರಿಯ ಪೆÇೀಸ್ಟ್‍ಮ್ಯಾನ್ ಅವರನ್ನು ಸಂಪರ್ಕಿಸಿ ಕೇವಲ 70/- ರೂಪಾಯಿ ಪಾವತಿಸಿ ಜೀವನ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಪೆÇೀಸ್ಟ್ ಇನ್ಫೋ ಅಪ್ಲಿಕೇಷನ್ ಮೂಲಕ ಕೋರಿಕೆಯನ್ನು ಸಲ್ಲಿಸಿದರೆ, ಸಂಬಂಧಿಸಿದ ಪೆÇೀಸ್ಟ್‍ಮ್ಯಾನ್‍ಗಳು ನಿಮ್ಮ ಮನೆ ಬಾಗಿಲಿಗೆ ಬಂದು ಡಿಜಿಟಲ್ ಜೀವನ ಪ್ರಮಾಣ ಪತ್ರ ನೀಡುತ್ತಾರೆ. ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಗ್ರಾಹಕರು ತಮ್ಮ ಸಮೀಪದ ಅಂಚೆ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕ ವಿ.ಎಲ್.ಚಿತ್ತಕೋಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ