ಶುಕ್ರವಾರ, ಡಿಸೆಂಬರ್ 15, 2023
ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಡಿ.16ರಂದು
ಬಳ್ಳಾರಿ,ಡಿ.15(ಕರ್ನಾಟಕ ವಾರ್ತೆ):
ನಗರದ ಜೆಸ್ಕಾಂ ಉಪವಿಭಾಗದ ಕಚೇರಿ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರಿಗೆ ಇರುವಂತಹ ಸಮಸ್ಯೆಗಳನ್ನು ನಿವಾರಿಸಲು ಡಿ.16ರಂದು ಬಳ್ಳಾರಿ ಉಪವಿಭಾಗ ಕಚೇರಿಯಲ್ಲಿ ಬೆಳಿಗ್ಗೆ 11ಕ್ಕೆ ವಿದ್ಯುತ್ ಗ್ರಾಹಕರ ಕುಂದುಕೊರತೆ ಮತ್ತು ಎಸ್ಒಪಿ ಕುರಿತು ಜಾಗೃತಿ ಮೂಡಿಸುವ ಸಭೆ ಏರ್ಪಡಿಸಲಾಗಿದೆ.
ಬಳ್ಳಾರಿ ಜೆಸ್ಕಾಂ ಉಪವಿಭಾಗ-1 ಹಾಗೂ ಉಪವಿಭಾಗ-2ರ ವ್ಯಾಪ್ತಿಗೆ ಸಂಬಂಧಿಸಿದಂತೆ ಸಮಸ್ಯೆ ಇರುವಂತಹ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ