ಗುರುವಾರ, ಡಿಸೆಂಬರ್ 14, 2023

ಅಂಚೆ ಇಲಾಖೆಯ ನಿವೃತ್ತ ಪಿಂಚಣಿದಾರರಿಗಾಗಿ - ಪಿಂಚಣಿ ಅದಾಲತ್ ಡಿ.18ರಂದು

ಬಳ್ಳಾರಿ,ಡಿ.14(ಕರ್ನಾಟಕ ವಾರ್ತೆ): ಅಂಚೆ ಇಲಾಖೆಯಿಂದ ನಿವೃತ್ತರಾದ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಇಲಾಖಾ ನೌಕರರಿಗಾಗಿ ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಡಿ.18ರಂದು ಸಂಜೆ 4ಕ್ಕೆ ಬಳ್ಳಾರಿ ವಿಭಾಗ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ. ಪಿಂಚಣಿದಾರರು ತಮ್ಮ ಕುಂದು-ಕೊರತೆಗಳಿದ್ದರೆ ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ವಿಭಾಗೀಯ ಕಾರ್ಯಾಲಯ ಕೋಟೆ, ಬಳ್ಳಾರಿ, ಅವರಿಗೆ ಡಿ.18 ಮುಂಚಿತವಾಗಿ ತಲಪುವಂತೆ ಪತ್ರ ಮುಖೇನ ಅಥವಾ doballari.ka@indiapost.gov.in ಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡಬಹುದು ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ