ಸೋಮವಾರ, ಡಿಸೆಂಬರ್ 11, 2023
ಕಾಟೇರ ಶಿವಕುಮಾರಗೆ ಡಾಕ್ಟರೇಟ್ ಪದವಿ
ಬಳ್ಳಾರಿ,ಡಿ.11(ಕರ್ನಾಟಕ ವಾರ್ತೆ):
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹುಣಸಿಹಳ್ಳಿ ಗ್ರಾಮದ ಕಾಟೇರ ಶಿವಕುಮಾರ ತಂದೆ ವೃಷಭೇಂದ್ರೆಪ್ಪ ಇವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ (ಎಕನಾಮಿಕ್ಸ್) ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಸಮಾಜ ವಿಜ್ಞಾನ ನಿಕಾಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಪಿ.ಎಸ್.ಶಶಿಧರ ಅವರ ಮಾರ್ಗದರ್ಶನದಲ್ಲಿ “ಆನ್ ಅನಲಿಸಿಸ್ ಆನ್ ಕಾಂಟ್ರಾಕ್ಟ್ ಫಾಮಿರ್ಂಗ್ ಇನ್ ಹೈದರಾಬಾದ್-ಕರ್ನಾಟಕ ರಿಜಿನ್” ಎಂಬ ವಿಷಯದಲ್ಲಿ ಪಿ.ಹೆಚ್.ಡಿ ಮಹಾ ಪ್ರಬಂಧ ಮಂಡಿಸಿದ್ದಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ ಎಂದು ವಿವಿಯು ಪ್ರಕಟಣೆಯಲ್ಲಿ ತಿಳಿಸಿದೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ