ಶುಕ್ರವಾರ, ಡಿಸೆಂಬರ್ 15, 2023

ವಿವಿಯ ಆದಿತ್ಯಗೆ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕುಸ್ತಿ ಪಂದ್ಯಾವಳಿಯಲ್ಲಿ ಕಂಚಿನ ಪದಕ, ವಿವಿಯಿಂದ ಅದ್ದೂರಿ ಸ್ವಾಗತ

ಬಳ್ಳಾರಿ,ಡಿ.15(ಕರ್ನಾಟಕ ವಾರ್ತೆ): ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಸ್ತಿ ತಂಡದ ಆದಿತ್ಯ (ವೀರಶೈವ ಮಹಾವಿದ್ಯಾಲಯ) ಚಂಡಿಗಡ ವಿಶ್ವವಿದ್ಯಾಲಯದಲ್ಲಿ ಜರುಗಿದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ಮತ್ತು ಮಹಿಳಾ ಕುಸ್ತಿ (ಗ್ರೀಕೊ ರೋಮನ್ 87 ಕೆಜಿ) ಪಂದ್ಯಾವಳಿಯಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನದಲ್ಲಿ ಕಂಚಿನ ಪದಕವನ್ನು ಪಡೆಯುವುದರ ಮೂಲಕ ವಿಶ್ವವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿರುತ್ತಾನೆ ಅದರ ಜೊತೆಗೆ ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಡೆಯಲಿರು ಖೇಲೊ ಇಂಡಿಯಾ ವಿಶ್ವವಿದ್ಯಾಲಯ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ. ಈ ಕ್ರೀಡಾಪಟುವಿಗೆ ಮತ್ತು ತಂಡದ ವ್ಯವಸ್ಥಾಪಕರು ಹಾಗೂ ತರಬೇತುದಾರರಾದ ಮಲ್ಲಿಕಾರ್ಜುನ ವಾಯ್.ಡಿ. ರವರಿಗೆ ವಿಶ್ವವಿದ್ಯಾಲಯದ ಆಡಳಿತ ವರ್ಗದವರು ಕುಲಪತಿಗಳು, ಕುಲಸಚಿವರು, ಕುಲಸಚಿವರು (ಮೌಲ್ಯಮಾಪನ) ಹಣಕಾಸು ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶುಭಕೋರಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ