ಗುರುವಾರ, ಡಿಸೆಂಬರ್ 28, 2023

ವೃದ್ಧೆ ಕಾಣೆ; ಪತ್ತೆಗಾಗಿ ಮನವಿ

ಬಳ್ಳಾರಿ,ಡಿ.28(ಕರ್ನಾಟಕ ವಾರ್ತೆ): ನಗರದ ಕಾರ್ಕಲತೋಟದ ಹನುಮಾನ್ ನಗರದ ಸರ್ಕಾರಿ ಶಾಲೆಯ ಹತ್ತಿರದ 05ನೇ ವಾರ್ಡ್‍ನ ನಿವಾಸಿ ನಾಗೋತಿ ವರಲಕ್ಷ್ಮಿ ಎನ್ನುವ 73 ವರ್ಷದ ವೃದ್ಧೆ ಡಿ.25ರಂದು ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗಾಗಿ ಸಹಕರಿಸಬೇಕು ಎಂದು ಠಾಣಾಧಿಕಾರಿಯವರು ತಿಳಿಸಿದ್ದಾರೆ. ಕಾಣೆಯಾದ ವೃದ್ಧೆಯ ಚಹರೆ ಗುರುತು: ಅಂದಾಜು 5.6 ಅಡಿ, ಕೆಂಪನೇ ಮೈಬಣ್ಣ, ದುಂಡು ಮುಖ, ತೆಳ್ಳನೇ ಮೈಕಟ್ಟು ಹೊಂದಿರುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಸೀರೆ, ತಿಳಿ ಬಿಳಿ ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ. ಈ ಮೇಲ್ಕಂಡ ಚಹರೆಯುಳ್ಳ ವೃದ್ಧೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ