ಶುಕ್ರವಾರ, ಡಿಸೆಂಬರ್ 29, 2023
ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಬಳ್ಳಾರಿ,ಡಿ.29(ಕರ್ನಾಟಕ ವಾರ್ತೆ):
ಕಂಪ್ಲಿ ಪಟ್ಟಣದಲ್ಲಿ ವಿವಿಧೆಡೆ ವೃತ್ತ ಹಾಗೂ ಮಹನೀಯರ ಪುತ್ಥಳಿಗಳನ್ನು ಸ್ಥಾಪಿಸಿ ಅನಾವರಣಗೊಳಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ತಿಳಿಸಿದ್ದಾರೆ.
ಕಂಪ್ಲಿ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಮಹರ್ಷಿ ವಾಲ್ಮೀಕಿ ವೃತ್ತ, ಕನಕದಾಸರ ವೃತ್ತ, ಬಸವೇಶ್ವರ ವೃತ್ತ ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ವೃತ್ತಗಳನ್ನು ನಿರ್ಮಿಸಿ, ಅವರ ಪುತ್ಥಳಿಯನ್ನು ಅನಾವರಣ ಮಾಡುವ ಕುರಿತು ಕಂಪ್ಲಿ ಶಾಸಕರು ಕೋರಿರುತ್ತಾರೆ.
ಕಂಪ್ಲಿ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ವೃತ್ತಗಳನ್ನು ನಿರ್ಮಿಸಿ, ಮಹನೀಯರ ಪುತ್ಥಳಿಯನ್ನು ಅನಾವರಣ ಮಾಡುವ ಬಗ್ಗೆ ಯಾರಿಗಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ಮತ್ತು ಪೂರಕ ದಾಖಲೆಗಳೊಂದಿಗೆ ಪ್ರಕಟಣೆಗೊಂಡ 30 ದಿನದೊಳಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದಾಗಿದೆ.
ಅವಧಿ ಮೀರಿ ಬಂದ ಮನವಿ ಹಾಗೂ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ