ಮಂಗಳವಾರ, ಡಿಸೆಂಬರ್ 26, 2023
ಅಪರಿಚಿತ ಮೃತ ವ್ಯಕ್ತಿ; ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ):
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯು ಡಿ.22 ರಂದು ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ.
ಚಹರೆ ಗುರುತು: ಎತ್ತರ ಸುಮಾರು 5.5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, ತಲೆಯಲ್ಲಿ ಒಂದೂವರೆ ಇಂಚಿನ ಕಪ್ಪು ಕೂದಲು, ಬಿಳಿ ಮಿಶ್ರಿತ ಕಪ್ಪು ಮೀಸೆ ಮತ್ತು ಗಡ್ಡ ಇದ್ದು, ಬಿಳಿ ಬಣ್ಣದ ಅಂಗಿ, ಗ್ರೇ ಬಣ್ಣದ ಜಾಕೆಟ್, ಗ್ರೇ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್ಪೇಟೆ ಪೆÇಲೀಸ್ ಠಾಣೆಯ ದೂ.08392-272022, ಪಿ.ಎಸ್.ಐ ಮೊ.9480803081, ಪಿ.ಐ ಮೊ.9480803045 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪೆÇಲೀಸ್ ಸಬ್ಇನ್ಸ್ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ