ಶನಿವಾರ, ಡಿಸೆಂಬರ್ 30, 2023
ನಾಮ ನಿರ್ದೇಶನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ):
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಜಿಲ್ಲಾ ಆಯ್ಕೆ ಸಮಿತಿಗೆ ನಾಮ ನಿರ್ದೇಶನರನ್ನಾಗಿ ಮಾಡಲು ಅರ್ಹ ವಿಶ್ವಕರ್ಮ ಸಮುದಾಯದ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಒಬ್ಬ ಅಧಿಕಾರೇತರ ನಾಮ ನಿರ್ದೇಶನ ಸದಸ್ಯರನ್ನಾಗಿ 02 ವರ್ಷ ಅವಧಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು ಆಯ್ಕೆ ಮಾಡಲಿದ್ದು, ಅರ್ಹ ವಿಶ್ವಕರ್ಮ ಸಮುದಾಯದ ಜನಾಂಗದವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನ ಜ.08 ಆಗಿರುತ್ತದೆ. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಅರ್ಹತೆ:
ನಾಮ ನಿರ್ದೇಶನ ಬಯಸುವ ವ್ಯಕ್ತಿಯು ಬಳ್ಳಾರಿ ಜಿಲ್ಲೆಯಲ್ಲಿ ಕನಿಷ್ಠ 15 ವರ್ಷ ವಾಸವಾಗಿರಬೇಕು. ಕನಿಷ್ಠ 35 ವರ್ಷ ಗರಿಷ್ಠ 65 ವರ್ಷ ವಯೋಮಿತಿಯೋಳಗಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡಿರಬೇಕು. ಬಳ್ಳಾರಿ ಜಿಲ್ಲೆಯ ಸಮಗ್ರ ಮಾಹಿತಿ ವಿಶ್ವಕರ್ಮ ಜನಾಂಗದವರು ವಾಸಿಸುವ ಸ್ಥಳ, ಕೈಗೊಳ್ಳುವ ಉದ್ಯೋಗ ಇತ್ಯಾದಿ ಅಂಕಿ ಅಂಶಗಳ ಮಾಹಿತಿ ತಿಳಿದಿರಬೇಕು. ಅರ್ಜಿ ಸಲ್ಲಿಸುವ ವ್ಯಕ್ತಿಯ ಮೇಲೆ ಕ್ರಿಮಿನಲ್ ಮೊಕದ್ದಮೆ ಇರಬಾರದು ಹಾಗೂ ದಂಡ, ಜುಲ್ಮಾನ, ಶಿಕ್ಷೆ ಅನುಭವಿಸಿರಬಾರದು.
ಹೆಚ್ಚಿನ ಮಾಹಿತಿಗಾಗಿ ನಗರದ ಕುಮಾರಸ್ವಾಮಿ ದೇವಸ್ಥಾನ ಎದುರುಗಡೆಯ ಕ್ಲಬ್ ರೋಡ್ನ ವೀರನಗೌಡ ಕಾಲೋನಿಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-267038ಗೆ ಸಂಪರ್ಕಿಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ