ಬುಧವಾರ, ಡಿಸೆಂಬರ್ 27, 2023
ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾ
ಬಳ್ಳಾರಿ,ಡಿ.27(ಕರ್ನಾಟಕ ವಾರ್ತೆ):
ನಗರದಲ್ಲಿ ಬುಧವಾರದಂದು ಅಪರಾಧ ತಡೆ ಮಾಸಾಚರಣೆ-2023ರ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಜಿಲ್ಲಾ ಪೆÇಲೀಸ್ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ಹಾರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಕ್ಕಳ ವಿಶೇಷ ಪೆÇಲೀಸ್ ಘಟಕದ ನೋಡಲ್ ಅಧಿಕಾರಿಯೂ ಆಗಿರುವ ಕೆ.ಪಿ.ರವಿಕುಮಾರ್, ಬಳ್ಳಾರಿ ನಗರ ಉಪವಿಭಾಗ ಡಿ.ಎಸ್.ಪಿ ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೆÇಲೀಸ್ ಅಧಿಕಾರಿ ಚಂದ್ರಕಾಂತ ನಂದಾರೆಡ್ಡಿ, ಸ್ಥಳೀಯ ಪೆÇಲೀಸ್ ಠಾಣೆಗಳ ಪೆÇಲೀಸ್ ಇನ್ಸ್ಪೆಕ್ಟರ್, ಪಿ.ಎಸ್.ಐ ಮಹಿಳಾ ಪೆÇಲೀಸ್ ಸಿಬ್ಬಂದಿ, ಬಳ್ಳಾರಿ ನಗರದ ವಿವಿಧ ಶಾಲೆಗಳಿಂದ ಸುಮಾರು 500 ಜನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು, ಬಳ್ಳಾರಿ ನಗರದ ಒಟ್ಟು 30 ಜನ ಪೆÇಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಜಾಥಾವು ಜಿಲ್ಲಾ ಪೆÇಲೀಸ್ ಕಚೇರಿಯಿಂದ ಆರಂಭವಾಗಿ ದುರುಗಮ್ಮ ಗುಡಿ ಮೂಲಕ ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಮೀನಾಕ್ಷಿ ಸರ್ಕಲ್ನಿಂದ ಸಂಗಮ್ ವೃತ್ತದವರೆಗೆ ಸಾಗಿ ಬಂದಿತು.
ಜಾಗೃತಿ ಜಾಥಾದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು, ಮಾದಕ ದ್ರವ್ಯಗಳು ಹಾಗೂ ಸೈಬರ್ ಅಪರಾಧಗಳ ಕುರಿತು, ಸ್ವತ್ತಿನ ಅಪರಾಧಗಳ ಕುರಿತು, ಸಂಚಾರಿ ನಿಯಮ ಕುರಿತು ನಗರದಲ್ಲಿ ಜಾಗೃತಿ ಮೂಡಿಸಲಾಯಿತು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ