ಗುರುವಾರ, ಡಿಸೆಂಬರ್ 28, 2023
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಡಿ.28(ಕರ್ನಾಟಕ ವಾರ್ತೆ):
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸುಮಾರು 45ರಿಂದ 50 ವರ್ಷದ ಅನಾಮಧೇಯ ವ್ಯಕ್ತಿಯು ಡಿ.22 ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ವಿಮ್ಸ್ನ ಶೀಥಲೀಕೃತ ಶವಗಾರ ಕೋಣೆಯಲ್ಲಿರಿಸಲಾಗಿದೆ. ವಾರಸುದಾರರು ತಿಳಿದಿರುವುದಿಲ್ಲ.
ಚಹರೆ ಗುರುತು: ಎತ್ತರ ಸುಮಾರು 5.5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, ತಲೆಯಲ್ಲಿ ಒಂದೂವರೆ ಇಂಚಿನ ಬಿಳಿ ಮಿಶ್ರಿತ ಕಪ್ಪು ಕೂದಲು, ಬಿಳಿ ಮಿಶ್ರಿತ ಕಪ್ಪು ಮೀಸೆ ಮತ್ತು ಗಡ್ಡ ಇದ್ದು, ಎಡ ಮೊಣಕೈವರೆಗೆ ಕೈ ಇರುವುದಿಲ್ಲ. ಬಿಳಿ ಬಣ್ಣದ ಮಾಸಿದ ತುಂಬು ತೋಳಿನ ಅಂಗಿ, ನೀಲಿ ಬಣ್ಣದ ಬನಿಯನ್, ನೀಲಿ ಬಣ್ಣದ ಚೌಕಳಿಯ ಲುಂಗಿ ಧರಿಸಿರುತ್ತಾನೆ.
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್ಪೇಟೆ ಪೆÇಲೀಸ್ ಠಾಣೆಯ ದೂ.08392-272022, ಪಿ.ಎಸ್.ಐ ಮೊ.9480803081, ಪಿ.ಐ ಮೊ.9480803045 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಬ್ರೂಸ್ಪೇಟೆ ಪೊಲೀಸ್ ಠಾಣೆಯ ಸಹಾಯಕ ಪೆÇಲೀಸ್ ಸಬ್ಇನ್ಸ್ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ