ಮಂಗಳವಾರ, ಜನವರಿ 2, 2024

ವಿಕಲಚೇತನರ ರಿಯಾಯಿತಿ ಬಸ್ ಪಾಸ್‍ಗಳ ನವೀಕರಣ

ಬಳ್ಳಾರಿ,ಜ.02(ಕರ್ನಾಟಕ ವಾರ್ತೆ): 2024ನೇ ಸಾಲಿಗಾಗಿ ಜ.01 ರಿಂದ ಡಿ.31 ರವರೆಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‍ಗಳನ್ನು ಮಾನ್ಯತೆ ಇರುವಂತೆ ಫಲಾನುಭವಿಗಳು ನವೀಕರಣ ಮಾಡಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ತಿಳಿಸಿದ್ದಾರೆ. ವಿಕಲಚೇತನರ ರಿಯಾಯಿತಿ ಬಸ್ ಪಾಸ್‍ಗಳನ್ನು ನವೀಕರಣ ಮಾಡಿಕೊಳ್ಳಲು ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2023 ನೇ ಸಾಲಿನಲ್ಲಿ ವಿತರಿಸಲಾಗಿರುವ ಅಂದರೆ 2023ರ ಡಿ.31ರ ವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್‍ಗಳನ್ನು ನವೀಕರಿಸದೇ 2024ರ ಫೆ.29ರ ವರೆಗೆ ಮಾನ್ಯತೆ ನೀಡಲಾಗಿದ್ದು, ಆ ದಿನಾಂಕದವರೆಗೆ ವಿಕಲಚೇತನರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. 2023ನೇ ಸಾಲಿನಲ್ಲಿ ವಿತರಣೆ ಮಾಡಿದ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು 05 ಜನವರಿ 2024 ರಿಂದ 29 ಫೆಬ್ರವರಿ 2024 ರ ಒಳಗೆ ಎಲ್ಲಾ ಸೂಕ್ತ ದಾಖಲಾತಿಗಳೊಂದಿಗೆ ಸೇವಾಸಿಂಧು ಪೆÇೀರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿ, ಪಾಸ್‍ಶುಲ್ಕ ರೂ.660 ಗಳನ್ನು ಪಾವತಿಸಿ, ಬಳ್ಳಾರಿ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಸಿರುಗುಪ್ಪ, ಕುರುಗೋಡು, ಸಂಡೂರು ಘಟಕಗಳಲ್ಲಿ ವಿಕಲಚೇತನ ಫಲಾನುಭವಿಗಳು ನವೀಕರಣ ಮಾಡಿಸಿಕೊಳ್ಳಬಹುದಾಗಿದೆ. ಫೆ.29 ರ ನಂತರ ಬರುವ ಬಸ್‍ಪಾಸ್‍ಗಳನ್ನು ನವೀಕರಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ