ಗುರುವಾರ, ಫೆಬ್ರವರಿ 29, 2024
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಉದ್ಘಾಟನೆ
ಬಳ್ಳಾರಿ,ಫೆ.29(ಕರ್ನಾಟಕ ವಾರ್ತೆ):
ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು, ಇಂದು ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ‘ಸಿ' ಬ್ಲಾಕ್ ನ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 49 ರಲ್ಲಿನ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತ, ಉಪಮೇಯರ್ ಬಿ.ಜಾನಕಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್.ಎನ್., ಡಿಎಂಎಫ್ ವಿಶೇಷಾಧಿಕಾರಿ ಪಿ.ಎಸ್.ಮಂಜುನಾಥ, ತಹಶೀಲ್ದಾರ ಗುರುರಾಜ ಸೇರಿದಂತೆ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ