ಶನಿವಾರ, ಮಾರ್ಚ್ 30, 2024

ಯುವಕ ನಾಪತ್ತೆ: ಪತ್ತೆಗೆ ಮನವಿ

ಬಳ್ಳಾರಿ,ಮಾ.30(ಕರ್ನಾಟಕ ವಾರ್ತೆ): ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟಿ.ಮೌನೇಶ ತಂದೆ ತುಪ್ಪದ ತಾಯಪ್ಪ ಎನ್ನುವ 19 ವರ್ಷದ ಯುವಕ ಸಿಂಧಿಗೇರಿ ಜಾತ್ರೆಗೆ ಹೋಗಿಬರುತ್ತೇನೆ ಎಂದು ಹೇಳಿಹೋದವನು ಮನೆಗೆ ಬಾರದೇ ಮಾ.06 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಬಾಲಕನ ಚಹರೆ ಗುರುತು: ಸುಮಾರು 4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಬಲಗಡೆ ಕಣ್ಣಿನ ಹತ್ತಿರ ಕಪ್ಪು ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಗೆರೆಯುಳ್ಳ ತೋಳಿನ ಅಂಗಿ, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಸ್‍ಪಿ ಅವರ ದೂ.08392-258400, ತೋರಣಗಲ್ಲು ಉಪವಿಭಾಗ ಡಿಎಸ್‍ಪಿ ಮೊ.9480803010, ಕುರುಗೋಡು ಸಿಪಿಐ ಮೊ.9480803039 ಮತ್ತು ಪಿಎಸ್‍ಐ ಮೊ.9480803051 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ