ಶನಿವಾರ, ಮಾರ್ಚ್ 2, 2024

ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದಿಂದ ಜನ ಸಂಪರ್ಕ ಸಭೆ/ಅಹವಾಲು ಸ್ವೀಕಾರ

ಬಳ್ಳಾರಿ,ಮಾ.02(ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸಂಗಮೇಶ ಮತ್ತು ಮಹಮ್ಮದ್ ರಫಿ ಇವರ ನೇತೃತ್ವದಲ್ಲಿ ಮಾರ್ಚ್ ಮಾಹೆಯಲ್ಲಿ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ. *ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:* ಮಾ.12 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡು ತಾಲ್ಲೂಕಿನ ತಹಸೀಲ್ದಾರರ ಕಚೇರಿ ಸಭಾಂಗಣ. ಮಾ.13 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರ ವರೆಗೆ ಸಿರುಗುಪ್ಪ ತಾಲ್ಲೂಕಿನ ಸಿ.ಡಿ.ಪಿ.ಓ ಕಚೇರಿ ಸಭಾಂಗಣ. ಮಾ.15 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರ ಸಂಡೂರು ಪಟ್ಟಣದ ತಹಸೀಲ್ದಾರರ ಕಚೇರಿ ಸಭಾಂಗಣ. ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ವಿಚಾರಿಸಲಾಗುತ್ತದೆ ಹಾಗೂ ಸಾರ್ವಜನಿಕರು ತಮ್ಮ ಅವಹಾಲುಗಳನ್ನು ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:1 ಮತ್ತು 2ಗಳನ್ನು ನೀಡಲಾಗುತ್ತದೆ. ಕುಂದುಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ದಿನದಂದು ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ