ಗುರುವಾರ, ಮಾರ್ಚ್ 21, 2024

ಲೋಕಸಭೆ ಸಾರ್ವತ್ರಿಕ ಚುನಾವಣೆ; ಕಂಟ್ರೋಲ್ ರೂಂ ಆರಂಭ

ಬಳ್ಳಾರಿ,ಮಾ.21(ಕರ್ನಾಟಕ ವಾರ್ತೆ): ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಅಂಗವಾಗಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವ ಸಂಬಂಧ ಸಾರ್ವಜನಿಕರ ದೂರು-ದುಮ್ಮಾನಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಮಾಹಿತಿ ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ಟೋಲ್ ಫ್ರೀ ಸಂಖ್ಯೆ 08392-277100 ಮತ್ತು 1950 ಕರೆ ಮಾಡಿ ತಿಳಿಸಿಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ